
ಬೆಂಗಳೂರು[ಮೇ. 21] ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ನಂತರ ಜೆಡಿಎಸ್ ಸಭೆ ನಡೆಸಲು ಸಿದ್ಧವಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ಎಕ್ಸಿಟ್ ಪೋಲ್ ವ್ಯತಿರಿಕ್ತ ಫಲಿತಾಂಶ ಬಂದ ಕಾರಣಕ್ಕೆ ಸಭೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಸಭೆ ಬಗ್ಗೆ ಆಸಕ್ತಿ ವಹಿಸದ ಎಚ್.ಡಿ.ದೇವೇಗೌಡ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಬಿಜೆಪಿ ವಿರೋಧಿ ಪ್ರಾದೇಶಿಕ ಪಕ್ಷಗಳ ಸಭೆ ನಡೆಯುವ ಸಾಧ್ಯತೆ ಕ್ಷೀಣವಾಗಿದೆ.
ಸಮೀಕ್ಷೆಗಳಿಂದ ನಿರಾಸೆ: ಕಿಂಗ್ ಮೇಕರ್ಗಳ ರಣತಂತ್ರ ಬದಲು!
23 ರ ನಂತರ ಫಲಿತಾಂಶ ಬಂದ ಬಳಿಕ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ಮಹಾಘಟಬಂಧನ್ ಗೆ ಪೂರಕವಾದ ಫಲಿತಾಂಶ ಬಂದ್ರೆ ತಕ್ಷಣವೇ ಸಭೆಗೆ ಸಮಯ ನಿಗದಿ ಮಾಡಲಾಗುತ್ತದೆ. ಅಲ್ಲಿವರೆಗೆ ತಟಸ್ಥವಾಗಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.