
ಬೆಂಗಳೂರು(ಮಾ.23): ಅಡ್ಡಮತದಾನ ಮಾಡಿ ಜೆಡಿಎಸ್'ನಿಂದ ಅಮಾನತ್ತಾಗಿದ್ದ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಕೆಲಹೊತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಜೆ.ಸಿ ಚಂದ್ರಶೇಖರ್ ಪರವಾಗಿ ಜೆಡಿಎಸ್'ನ 7 ಬಂಡಾಯ ಶಾಸಕರು ಮತ ಚಲಾಯಿಸಲಿದ್ದಾರೆ ಎಂದು ಸುವರ್ಣನ್ಯೂಸ್'ಗೆ ಓರ್ವ ಬಂಡಾಯ ಶಾಸಕ ಮಾಹಿತಿ ನೀಡಿದ್ದಾರೆ.
ಇದೇವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಹಾಗೆಯೇ ಜೆಡಿಎಸ್ ಬಂಡಾಯ ಶಾಸಕರು ಭಾನುವಾರ ಮೈಸೂರಿನಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.