
ಬೆಂಗಳೂರು(ಮಾ.22): ಜೆಡಿಎಸ್'ನ 7 ಬಂಡಾಯ ಶಾಸಕರು ವಿಪ್ ಉಲ್ಲಂಘನೆ ಪ್ರಕರಣದ ವಿಚಾರಣೆ ಏಪ್ರಿಲ್ 2ಕ್ಕೆ ನಿಗದಿಯಾಗಿದ್ದು ಶಾಸಕತ್ವದ ಅನರ್ಹತೆಯ ತೂಗುಗತ್ತಿಯಿಂದ ತಪ್ಪಿಸಿಕೊಂಡಿದ್ದಾರೆ.
ಹೈಕೋರ್ಟ್ ಆದೇಶ ಬರುತ್ತಿದಂತೆ ಸಮಾಧಾನಗೊಂಡಿರುವ ಬಂಡಾಯ ಶಾಸಕರು ರಾಜ್ಯಸಭಾ ಚುನಾವಣೆ ಮತದಾನದ ಬಳಿಕ ರಾಜೀನಾಮೆಗೆ ನಿರ್ಧರಿಸಿದ್ದಾರೆ. ರಾಜೀನಾಮೆ ನೀಡಿದ ನಂತರ ಮೈಸೂರಿನಲ್ಲಿ ಮಾರ್ಚ್ 25ರಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಮತದಾನವಾದ ಬಳಿಕ ಸ್ಪೀಕರ್ಗೆ ರಾಜೀನಾಮೆ ಕೊಡಲು ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಸಿಎಂ ಸೂಚನೆಯಂತೆ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.