ಡಿ.ಕೆ ರವಿ ಮಾವ ಹನುಮಂತರಾಯಪ್ಪಗೆ ಆರ್.ಆರ್ ನಗರ ಜೆಡಿಎಸ್ ಟಿಕೆಟ್..?

Published : Apr 11, 2018, 10:59 AM ISTUpdated : Apr 14, 2018, 01:13 PM IST
ಡಿ.ಕೆ ರವಿ ಮಾವ ಹನುಮಂತರಾಯಪ್ಪಗೆ ಆರ್.ಆರ್ ನಗರ ಜೆಡಿಎಸ್ ಟಿಕೆಟ್..?

ಸಾರಾಂಶ

ಇಬ್ಬರ ಜಗಳದಲ್ಲಿ ಮೂರನೆಯವರಿಗೆ ದಕ್ಕುತ್ತಾ ಸ್ಥಾನ.? ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಇದೀಗ ಮೂಡಿದ್ದು, ಡಿಕೆ ರವಿ ಮಾವ ಹನುಮಂತ ರಾಯಪ್ಪಗೆ ಆರ್ ಆರ್ ನಗರ ಟಿಕೆಟ್‌ ಪಕ್ಕಾ ಆಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಬೆಂಗಳೂರು : ಇಬ್ಬರ ಜಗಳದಲ್ಲಿ ಮೂರನೆಯವರಿಗೆ ದಕ್ಕುತ್ತಾ ಸ್ಥಾನ.? ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಇದೀಗ ಮೂಡಿದ್ದು, ಡಿಕೆ ರವಿ ಮಾವ ಹನುಮಂತ ರಾಯಪ್ಪಗೆ ಆರ್ ಆರ್ ನಗರ ಟಿಕೆಟ್‌ ಪಕ್ಕಾ ಆಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

13 ರಂದು ನಡೆಯಲಿರುವ ಸಮಾವೇಶದಲ್ಲಿ ಈ ಸಂಬಂಧ ಘೋಷಣೆ ಮಾಡುವ ಸಾದ್ಯತೆ ಇದೆ. ಎಸ್ ಎಂ ಕೃಷ್ಣ ಬೆಂಬಲಿಗರರಾಗಿರುವ ಹನುಮಂತರಾಯಪ್ಪ ಇದುವರೆಗೆ  ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು.

ಆದರೆ ಈಗ ಬಿಜೆಪಿಯಲ್ಲಿಯೇ ಅಸಮಾಧಾನ ಪರಿಸ್ಥಿತಿ ಇದೆ. ಹಾಗಾಗಿ ಜೆಡಿಎಸ್ ಸೇರ್ಪಡೆ ಯಾಗಲು ಚಿಂತನೆ ನಡೆಸಿದ್ದು,  ಪ್ರಜ್ವಲ್ ಜೊತೆ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ಗೆ ಟಿಕೆಟ್ ತಪ್ಪಿದ್ದರಿಂದ ಹನುಮಂತ ರಾಯಪ್ಪಗೆ ಟಿಕೆಟ್ ದೊರಕುವ ಸಾದ್ಯತೆ ಗಳೂ ಇವೆ. ಹನುಮಂತ ರಾಯಪ್ಪ ಜೆಡಿಎಸ್ ಅಭ್ಯರ್ಥಿ ಆದರೆ ಪ್ರಜ್ವಲ್ ಕೂಡಾ ಬೆಂಬಲಿಸುವ ಸಾದ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ