ಅತೃಪ್ತರಿಗೆ ಕಲ್ಪಿಸಿದ ವ್ಯವಸ್ಥೆ ನೆರೆ ಸಂತ್ರಸ್ತರಿಗೇಕಿಲ್ಲ? ಸಿಎಂ ಕುಟುಕಿದ ಎಚ್‌ಡಿಕೆ

Published : Aug 08, 2019, 01:20 PM ISTUpdated : Aug 08, 2019, 01:25 PM IST
ಅತೃಪ್ತರಿಗೆ ಕಲ್ಪಿಸಿದ ವ್ಯವಸ್ಥೆ ನೆರೆ ಸಂತ್ರಸ್ತರಿಗೇಕಿಲ್ಲ? ಸಿಎಂ ಕುಟುಕಿದ ಎಚ್‌ಡಿಕೆ

ಸಾರಾಂಶ

ವರುಣನ ಅಬ್ಬರಕ್ಕೆ ನಲುಗಿದ ಉತ್ತರ ಕರ್ನಾಟಕ ಮಂದಿ| ಾಸರೆ ಕಳೆದುಕೊಂಡು ಗಂಜಿ ಕೇಂದ್ರದಲ್ಲಿ ಆಶ್ರಯ| ಅತೃಪರಿಗೆ ಕಲ್ಪಿಸಿದ್ದ ವಿಶೇಷ  ವ್ಯವಸ್ಥೆ ಪ್ರವಾಹದಲ್ಲಿ ಸಿಲುಕಿದ ಬಡವರಿಗೇಕಿಲ್ಲ..? ಎಂದು ಪ್ರಶ್ನಿಸಿಯೇ ಬಿಟ್ರು ಕುಮಾರಸ್ವಾಮಿ

ಬೆಂಗಳೂರು[ಆ.08]: ಆಶ್ಲೇಷ ಮಳೆಯಬ್ಬರಕ್ಕೆ ಕರ್ನಾಟಕದ ಅರ್ಧಕ್ಕೂ ಹೆಚ್ಚು ಭಾಗ ಮುಳುಗಲಾರಂಭಿಸಿದೆ. ಸೂರು ಕಳೆದುಕೊಂಡ ಜನರು ಗಂಜಿ ಕೇಂದ್ರಕ್ಕೆ ಧಾವಿಸುತ್ತಿದ್ದಾರೆ. ಮನೆ, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಲಾರಂಭಿಸಿವೆ. ಮೂಕ ಪ್ರಾಣಿಗಳು ವರುಣನ ಅಬ್ಬರಕ್ಕೆ ಬಲಿಯಾಗುತ್ತಿವೆ. ವರುಣನ ತಾಂಡವಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಹೀಗಿರುವಾಗ ಮಾಜಿ ಸಿಎಂ ಕುಮಾರಸ್ವಾಮಿ ಹಾಲಿ ಸಿಎಂ ವಿರುದ್ಧ ಕಿಡಿ ಕಾರಿದ್ದು, ಅತೃಪ್ತರಿಗೆ ಮುಂಬೈಗೆ ಕಳುಹಿಸಲು ಕಲ್ಪಿಸಿದ್ದ ವಿಶೇಷ ವಿಮಾನ ವ್ಯವಸ್ಥೆ ಪ್ರವಾಹದಲ್ಲಿ ಸಿಲುಕಿದ ಬಡವರಿಗೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಹೌದು ಜೆಡಿಎಸ್ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, 'ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!' ಎನ್ನುವ ಮೂಲಕ ಹಾಲಿ ಸಿಎಂ ಬಿ. ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಕಿಡಿ ಕಾರಿದೆ.

ಮಳೆಯಬ್ಬರಕ್ಕೆ ತತ್ತರಿಸಿದ ಕರ್ನಾಟಕ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಿನ್ನೆ ಬುಧವಾರವೂ ಟ್ವೀಟ್ ಒಂದನ್ನು ಮಾಡುತ್ತಾ 'ರೋಮ್ ಹೊತ್ತಿ ಉರಿಯುವಾಗ  ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ.ಕರ್ನಾಟಕದಲ್ಲಿ ‌ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ.ಇದೇನಾ  ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ' ಎಂದು ಆಕ್ರೋಶ ವ್ಯಕ್ತಪಡಿಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ