ಶುರುವಾಯ್ತು ವಿಕಾಸ ಯಾತ್ರೆ; ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಜೆಡಿಎಸ್ ರಣಕಹಳೆ

Published : Nov 07, 2017, 09:26 PM ISTUpdated : Apr 11, 2018, 01:07 PM IST
ಶುರುವಾಯ್ತು ವಿಕಾಸ ಯಾತ್ರೆ; ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಜೆಡಿಎಸ್ ರಣಕಹಳೆ

ಸಾರಾಂಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದೆ.  ಬಿಜೆಪಿ ಪರಿವರ್ತನಾ ಯಾತ್ರೆ ಮೂಲಕ ಮತಬೇಟೆಗಿಳಿದ ಬೆನ್ನಲ್ಲೇ ಜೆಡಿಎಸ್ ಕೂಡ ರಾಜ್ಯಾದ್ಯಂತ ವಿಕಾಸ ಯಾತ್ರೆಗೆ ಹೊರಟಿದೆ.  ಸಿಎಂ ತವರು ಕ್ಷೇತ್ರದಲ್ಲೇ ದಳಪತಿಗಳು ಚುನಾವಣಾ ರಣಕಹಳೆ ಊದಿದ್ದಾರೆ.

ಬೆಂಗಳೂರು (ನ.07): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದೆ.  ಬಿಜೆಪಿ ಪರಿವರ್ತನಾ ಯಾತ್ರೆ ಮೂಲಕ ಮತಬೇಟೆಗಿಳಿದ ಬೆನ್ನಲ್ಲೇ ಜೆಡಿಎಸ್ ಕೂಡ ರಾಜ್ಯಾದ್ಯಂತ ವಿಕಾಸ ಯಾತ್ರೆಗೆ ಹೊರಟಿದೆ.  ಸಿಎಂ ತವರು ಕ್ಷೇತ್ರದಲ್ಲೇ ದಳಪತಿಗಳು ಚುನಾವಣಾ ರಣಕಹಳೆ ಊದಿದ್ದಾರೆ.

2018 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಇಂದು ಅಧಿಕೃತವಾಗಿ ರಣಕಹಳೆ ಮೊಳಗಿಸಿತು. ಸಿಎಂ ತವರಿನಿಂದಲೇ ದಳಪತಿಗಳು ಮತಬೇಟೆ ಆರಂಭಿಸಿದರು. ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಅಧಿದೇವತೆಗೆ ಪೂಜೆ ಸಲ್ಲಿಸಿ ಜೆಡಿಎಸ್ ವಿಕಾಸವಾಹಿನಿ ಪ್ರಚಾರ ರಥಕ್ಕೆ ಚಾಲನೆ ಕೊಡಲಾಯ್ತು. ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ದಂಪತಿ ಪುತ್ರನಿಗೆ ಹರಸಿದರು.  ನಂತರ ಉತ್ತನಹಳ್ಳಿ ಮಾರಮ್ಮನಿಗೆ ಪೂಜೆ ಸಲ್ಲಿಸಿ ರಿಂಗ್​ ರಸ್ತೆ ಮೂಲಕ ಕುಮಾರ ಪರ್ವ ಸಮಾವೇಶ ಸ್ಥಳಕ್ಕೆ ವಿಕಾಸವಾಹಿನಿ ಆಗಮಿಸಿತು.  ಸಮಾವೇಶದುದ್ದಕ್ಕೂ ಎಚ್​ಡಿಕೆ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಮುಂದಾಗಿರುವ ಸಿಎಂ ಅವರಿಗೆ ಸವಾಲೊಡ್ಡುವ ರೀತಿ ಸಮಾವೇಶ ಸಂಘಟಿಸುವಲ್ಲಿ ಯಶಸ್ವಿಯಾದ  ಶಾಸಕ ಜಿ.ಟಿ. ದೇವೇಗೌಡ ಕೂಡ ಸಿದ್ದರಾಮಯ್ಯ ವಿರುದ್ಧ  ಕಿಡಿ ಕಾರಿದರು.  ಸಿಎಂ ಅಲ್ಲ, ಯಾರೇ ನಿಂತರೂ ಚಾಮುಂಡೇಶ್ವರಿ  ಕ್ಷೇತ್ರದ ಜನರ ಆಶೀರ್ವಾದ ಇರುವ ತನಕ ನಾನು ಯಾರಿಗೂ ಹೆದರಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು