ಬಿಹಾರವಾಗಿದೆಯಾ ಮಂಡ್ಯ? ಕೇವಲ 9 ದಿನದಲ್ಲಿ ಜಿಲ್ಲೆಯಲ್ಲಿ 4 ಜೆಡಿಎಸ್ ಕಾರ್ಯಕರ್ತರ ಕೊಲೆ

Published : Jan 01, 2017, 06:37 AM ISTUpdated : Apr 11, 2018, 12:49 PM IST
ಬಿಹಾರವಾಗಿದೆಯಾ ಮಂಡ್ಯ? ಕೇವಲ 9 ದಿನದಲ್ಲಿ ಜಿಲ್ಲೆಯಲ್ಲಿ 4 ಜೆಡಿಎಸ್ ಕಾರ್ಯಕರ್ತರ ಕೊಲೆ

ಸಾರಾಂಶ

ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗುತ್ತಿದ್ದರೂ, ಮಂಡ್ಯ ಪೊಲೀಸ್ ಇಲಾಖೆ ಏನ್ ಮಾಡ್ತಿದೆ ಎಂದು ಜೆಡಿಎಸ್ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಹತ್ಯೆ ಸರಣಿ‌ ಮುಂದುವರೆದಂತೆ ಕಾಣುತ್ತಿದೆ. ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರೊಬ್ಬರ ಬರ್ಬರ ಹತ್ಯೆಯಾಗಿದೆ. ಕೊಲೆಯಾದ ಹರೀಶ್ ಅಲಿಯಾಸ್ ಗುಂಡ ಕೆಆರ್ ಪೇಟೆ ತಾಲೂಕಿನ ಪ್ರಮುಖ ಜೆಡಿಎಸ್ ಕಾರ್ಯಕರ್ತನಾಗಿದ್ದ. ಆತನ ಸಾವಿನೊಂದಿಗೆ 9 ದಿನದಲ್ಲಿ ಜಿಲ್ಲೆಯಲ್ಲಿ 4 ಜೆಡಿಎಸ್ ಕಾರ್ಯಕರ್ತರ ಹತ್ಯೆಯಾದಂತಾಗಿದೆ.

ಹಿಂದಿನ ಘಟನೆಗಳು:
* ಡಿ.24ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆನಮನಹಳ್ಳಿ ಗ್ರಾಮದಲ್ಲಿ ಕೇಬಲ್ ಕುಮಾರ್ ಎಂಬ ಜೆಡಿಎಸ್ ಕಾರ್ಯಕರ್ತನ ಹತ್ಯೆಯಾಗಿತ್ತು,

* ಡಿ.26ರಂದು ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಮುತ್ತುರಾಜು ಮತ್ತು ನಂದೀಶ್ ಎಂಬ ಇಬ್ಬರು ಜೆಡಿಎಸ್ ಕಾರ್ಯಕರ್ತರನ್ನು ಹತ್ಯೆಗೈಯಲಾಗಿತ್ತು.

ಈಗ ಒಂಬತ್ತು ದಿನಗಳ ಅಂತರದಲ್ಲಿ ಮಂಡ್ಯದಲ್ಲಿ ನಾಲ್ವರು ಜೆಡಿಎಸ್ ಕಾರ್ಯಕರ್ತರ ಹತ್ಯೆ ನಡೆದಿರೋದು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗುತ್ತಿದ್ದರೂ, ಮಂಡ್ಯ ಪೊಲೀಸ್ ಇಲಾಖೆ ಏನ್ ಮಾಡ್ತಿದೆ ಎಂದು ಜೆಡಿಎಸ್ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!