ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಧರ್ಮಸ್ಥಳಕ್ಕೆ ಪಾದಯಾತ್ರೆ

Published : Apr 08, 2018, 12:00 PM ISTUpdated : Apr 14, 2018, 01:13 PM IST
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಧರ್ಮಸ್ಥಳಕ್ಕೆ ಪಾದಯಾತ್ರೆ

ಸಾರಾಂಶ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎನ್ನುವ ಉದ್ದೇಶದಿಂದ ಯುವಕರು ಧರ್ಮಸ್ಥಳಕ್ಕೆ ಪಾದ ಯಾತ್ರೆ ಕೈಗೊಂಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿ ಸದಸ್ಯ ನಂಜಯ್ಯ ಹೇಳಿದರು.

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎನ್ನುವ ಉದ್ದೇಶದಿಂದ ಯುವಕರು ಧರ್ಮಸ್ಥಳಕ್ಕೆ ಪಾದ ಯಾತ್ರೆ ಕೈಗೊಂಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿ ಸದಸ್ಯ ನಂಜಯ್ಯ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಅಪೇಕ್ಷಿಸಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ 15 ಯುವಕರು ಧರ್ಮಸ್ಥಳಕ್ಕೆ ಕೈಗೊಂಡಿರುವ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅವಧಿಯಲ್ಲಿ ರೈತರ ಸಾಲ ಮನ್ನಾ, ರಾಜ್ಯದಲ್ಲಿ ಸಾರಾಯಿ ಹಾಗೂ ಲಾಟರಿ ನಿಷೇಧ ಮಾಡಿದ್ದು, ಸುವರ್ಣಗ್ರಾಮ ಯೋಜನೆಯನ್ನು ಜಾರಿಗೆ ತಂದಿದ್ದರು.

ಅಂಗವಿಕಲ, ವೃದ್ಧಾಪ್ಯ ಹಾಗೂ ವಿಧವಾ ವೇತನವನ್ನು ಹೆಚ್ಚಿಸುವುದರ ಜೊತೆಗೆ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದರು ಎಂದರು. ಹಲವು ಸೌಲಭ್ಯ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟ ಜಾರಿಗೊಳಿಸುವ ಮೂಲಕ ಮಕ್ಕಳಿಗೆ, ವೃದ್ಧರಿಗೆ ಆಸರೆಯಾಗಿದ್ದರು. ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆ ತಂದು ಮಹಿಳಾ ಸಬಲೀಕರಣಕ್ಕೆ ಕಾರಣರಾಗಿದ್ದರು.

ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಹಾಗೂ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಜನಪ್ರಿಯವಾದ ಆಡಳಿತವನ್ನು ನೀಡಿದ್ದ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯ ಮಂತ್ರಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಬಾಚೇನಹಟ್ಟಿ ಗ್ರಾಮದ ಯುವಕರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿರುವುದಾಗಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು