
ಮಂಡ್ಯ (ಜೂ.05): ‘ಜೆಡಿಎಸ್ ಪುಟಗೋಸಿ ಪಕ್ಷ’ ಎಂದು ವ್ಯಂಗ್ಯವಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಸೋಮವಾರ ಸಚಿವರ ಕಾರವಾರ ನಿವಾಸಕ್ಕೆ ಅಂಚೆ ಮೂಲಕ ಪುಟಗೋಸಿಗಳನ್ನು ರವಾನಿಸಿದ್ದಾರೆ.
ನಗರದ ಜಿಲ್ಲಾ ಅಂಚೆ ಕಚೇರಿ ಮುಂಭಾಗ ಜಮಾಯಿಸಿದ ಜೆಡಿಎಸ್ ಅಭಿಮಾನಿಗಳು, ಪುಟಗೋಸಿಗಳನ್ನು ಪ್ರದರ್ಶಿಸಿ ಕೇಂದ್ರ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ಜೆಡಿಎಸ್ ಪಕ್ಷವನ್ನು ಪುಟಗೋಸಿ ಎನ್ನುವ ಮೂಲಕ ಆ ಪಕ್ಷದ 37 ಶಾಸಕರನ್ನು ಆಯ್ಕೆ ಮಾಡಿರುವ ಜನರಿಗೆ ಅವಮಾನಿಸಿದ್ದಾರೆ.
ಪುಟಗೋಸಿ ಇರುವುದೇಕೆ ಎಂಬುದನ್ನು ಸಚಿವರು ಮರೆತಿರುವಂತಿದೆ. ಪುಟಗೋಸಿ ಇರುವುದು ಮಾನ ಉಳಿಸಿಕೊಳ್ಳಲು. ಆದರೆ, ಅದರ ಮೌಲ್ಯ ಗೊತ್ತಿಲ್ಲದ ಸಚಿವರು ಪುಟಗೋಸಿ ಬಳಸುತ್ತಿರುವಂತೆ ಕಾಣುತ್ತಿಲ್ಲ. ಆದ್ದರಿಂದ ಅವರಿಗೆ ಪುಟಗೋಸಿಗಳನ್ನು ಕಳಿಸುತ್ತಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.