
ಬೆಂಗಳೂರು [ಜು.19] : ಮದ್ಯಪಾನ ನಿಷೇಧಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಜನತಾದಳ (ಜೆಡಿಯು) ‘ಮದ್ಯಪಾನ ತ್ಯಜಿಸಿ, ಕ್ಷೀರಪಾನ ಸೇವಿಸಿ’ ಎಂಬ ರಾಷ್ಟ್ರೀಯ ಜಾಗೃತಿ ಆಂದೋಲನವನ್ನು ಜು.20ರಂದು ಹಮ್ಮಿಕೊಂಡಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶಿವರಾಮ್, ಜು.21ರಂದು ಬೆಳಗ್ಗೆ 11ಕ್ಕೆ ಪುರಭವನ ಬಳಿ ಆಂದೋಲನ ನಡೆಯಲಿದ್ದು, ಜೆಡಿಯು ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಸಂಜಯ್ಕುಮಾರ್ ನೇತೃತ್ವ ವಹಿಸಲಿದ್ದಾರೆ.
ಈಗಾಗಲೇ ಬಿಹಾರದಲ್ಲಿ ಜೆಡಿಯು ಸರ್ಕಾರ ಮದ್ಯಪಾನ ನಿಷೇಧಿಸಿದೆ. ಅದರಂತೆ ರಾಜ್ಯದಲ್ಲಿಯೂ ಮದ್ಯ ನಿಷೇಧಿಸಬೇಕಿದೆ. ಮದ್ಯಪಾನ ನಿಷೇಧ ಬೆಂಬಲಿಸುವ ಸಂಘ, ಸಂಸ್ಥೆಗಳು ಆಂದೋಲನದ ಜೊತೆ ಕೈಜೋಡಿಸಬೇಕೆಂದು ಅವರು ಕೋರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.