
ನವದೆಹಲಿ[ಮೇ.31]:ಕೇಂದ್ರದಲ್ಲಿ ಕೇವಲ ಒಂದು ಸ್ಥಾನ ಮತ್ತು ಅಷ್ಟಾಗಿ ಮಹತ್ವವಲ್ಲದ ಖಾತೆ ಆಫರ್ ನೀಡಲಾಗಿದೆ ಎಂದು ಆರೋಪಿಸಿ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿ ಜೆಡಿಯು, ಸಂಪುಟದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಗುರುವಾರ ಮಾತನಾಡಿದ ಜೆಡಿಯು ರಾಷ್ಟ್ರೀಯ ವಕ್ತಾರ ಪವನ್ ವರ್ಮಾ ಅವರು, ‘ನಾವು ಸರ್ಕಾರದಲ್ಲಿ ಭಾಗಿಯಾಗುತ್ತಿಲ್ಲ. ಇದು ನಮ್ಮ ಪಕ್ಷದ ನಿರ್ಧಾರ’ ಎಂದು ಹೇಳಿದೆ.
ಈ ಬಗ್ಗೆ ಇದುವರೆಗೂ ಬಿಜೆಪಿ ಪ್ರತಿಕ್ರಿಯೆ ನೀಡಿಲ್ಲ. 2017ರಲ್ಲಿ ಬಿಹಾರದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ಸಖ್ಯ ತೊರೆದಿದ್ದ ಜೆಡಿಯು ಮತ್ತೆ ಎನ್ಡಿಎ ತೆಕ್ಕೆಗೆ ಮರಳಿತ್ತು. ಈ ಬಾರಿ ರಾಜ್ಯದ 40 ಸ್ಥಾನಗಳ ಪೈಕಿ ತಲಾ 17 ಸ್ಥಾನಗಳಲ್ಲಿ ಬಿಜೆಪಿ ಮತ್ತು ಜೆಡಿಯು ಸ್ಪರ್ಧಿಸಿದ್ದವು. 3 ಸ್ಥಾನಗಳನ್ನು ಮೈತ್ರಿಕೂಟದ ಇತರೆ ಪಕ್ಷಗಳಿಗೆ ನೀಡಲಾಗಿತ್ತು. ಈ ಪೈಕಿ ಎನ್ಡಿಎ ಮೈತ್ರಿಕೂಟ 39 ಸ್ಥಾನ ಗೆದ್ದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.