
ಮುಂಬೈ : ಜೆಟ್ ಏರ್ ವೇಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮವಾಗಿ ಪ್ರಯಾಣಿಕರು ಅನಾರೋಗ್ಯಕ್ಕೆ ಒಳಗಾದ ಘಟನೆ ಗುರುವಾರ ನಡೆದಿದೆ.
ಈ ಸಂಬಂಧ ನಾಗರಿಕ ವಿಮಾನ ಯಾನ ಸಚಿವಾಲಯವು ಸೂಕ್ತ ತನಿಖೆ ನಡೆಸುವಂತೆ ಆದೇಶ ನೀಡಿದೆ.
ಈ ಸಂಬಂಧ ತನಿಖೆ ನಡೆಸಿ ಆದಷ್ಟು ಶೀಘ್ರವೇ ವರದಿಯನ್ನು ನೀಡಬೇಕು ಎಂದು ನಾಗರಿಕ ವಿಮಾನ ಯಾನ ಸಚಿವಾಲಯವು ಜೆಟ್ ಏರ್ ವೇಸ್ ನಿರ್ದೇಶಕರಿಗೆ ತಿಳಿಸಿದೆ.
9w 0697 ಏರ್ ವೇಸ್ ಮುಂಬೈ ನಿಂದ ಜೈಪುರಕ್ಕೆ ತೆರಳುತ್ತಿತ್ತು. ಇದರಲ್ಲಿ 30 ಮಂದಿ ಪ್ರಯಾಣಿಕರಿದ್ದು , ಇದರ ಸಿಬ್ಬಂದಿ ಕ್ಯಾಬಿನ್ ಒತ್ತಡ ನಿರ್ವಹಣಾ ಸ್ವಿಚ್ ಹಾಕುವುದನ್ನು ಮರೆತದ್ದರಿಂದ ಈ ಅವಘಡ ಸಂಭವಿಸಿದೆ.
ಅಲ್ಲದೇ ಕಲವು ಪ್ರಯಾಣಿಕರಿಗೆ ಕಿವಿ ಮೂಗಿನಲ್ಲಿಯೂ ಕೂಡ ಈ ವೇಳೆ ರಕ್ತ ಸೋರಿಕೆಯಾಗಿದ್ದು, ಇವರೆಲ್ಲರನ್ನೂ ಕೂಡ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.