
ನೋಯ್ಡಾ(ಅ.16): ನಕ್ಸಲ್ ಕಮಾಂಡರ್ ಸೇರಿದಂತೆ ಆತನ ಐದು ಮಂದಿ ಸಹಚರರನ್ನು ಉತ್ತರಪ್ರದೇಶ ಭಯೋತ್ಪಾದನ ನಿಗ್ರಹ ಪಡೆ ಹಾಗೂ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ನಕ್ಸಲ್ ಕಮಾಂಡರ್ ಪ್ರದೀಪ್ ಸಿಂಗ್ ಖಾರ್'ವಾರ್ ಐದು ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಎಟಿಎಸ್ ನಕ್ಸಲ್ ಮುಖಂಡ ಹಾಗೂ ಆತನ ಸಹಚರರನ್ನು ಬಂಧಿಸಿದೆ.
ನಕ್ಸಲ್ ಕಮಾಂಡರ್ ಪ್ರದೀಪ್ ಸಿಂಗ್ ಖಾರ್'ವಾರ್ 2012ರ ಫೆಬ್ರವರಿಯಿಂದ ತಲೆಮರೆಸಿಕೊಂಡಿದ್ದ, ಆತನಿಂದ ಐದು ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಎನ್'ಸಿಆರ್ ಪ್ರಾಂತ್ಯದಲ್ಲಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎನ್ನಲಾಗುತ್ತಿದ್ದು, ಬಂಧಿತರಿಂದ ಆರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.