ಮಾಂಸ ವರ್ತಕನ ಥಳಿಸಿ ಹತ್ಯೆ: ಬಿಜೆಪಿ ನಾಯಕ ಅರೆಸ್ಟ್

Published : Jul 02, 2017, 11:51 AM ISTUpdated : Apr 11, 2018, 12:36 PM IST
ಮಾಂಸ ವರ್ತಕನ ಥಳಿಸಿ ಹತ್ಯೆ: ಬಿಜೆಪಿ ನಾಯಕ ಅರೆಸ್ಟ್

ಸಾರಾಂಶ

ಮಾಂಸ ವರ್ತಕನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ಬಿಜೆಪಿ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ಇನ್ನೋರ್ವಾ ಆರೋಪಿ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.

ರಾಮಗಢ, ಜಾರ್ಖಂಡ್: ಮಾಂಸ ವರ್ತಕನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ಬಿಜೆಪಿ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ಇನ್ನೋರ್ವಾ ಆರೋಪಿ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.

ಬಿಜೆಪಿ ನಾಯಕ ನಿತ್ಯಾನಂದ್ ಮಹಾತೋ ಹಾಗೂ ಸಂತೋಷ್ ಸಿಂಗ್ ಎಂಬವರನ್ನು ಪೊಲೀಸರು ಬಂಧಿಸಿದ್ದರೆ, ಚೋಟು ರಾಣಾ ನ್ಯಾಯಾಲಯದ ಮುಂದೆ ಹಾಜರಾಗಿ ಶರಣಾಗಿದ್ದಾನೆ.

ಹತ್ಯೆಗೆ ಸಂಬಂಧಿಸಿ ಪೊಲೀಸರು ಇನ್ನೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.

ಗೋಮಾಂಸ ಕೊಂಡೊಯ್ಯುತ್ತಿದ್ದಾನೆಂಬ ಗುಮಾನಿ ಮೇಲೆ ಹಝಾರಿಬಾಗ್ ಜಿಲ್ಲೆಯ ಮನುವಾ ಗ್ರಾಮದ ಮಾಂಸ ವರ್ತಕನೊಬ್ಬನನ್ನು ಕಳೆದ ಗುರುವಾರ ಗುಂಪೊಂದು ಸಾರ್ವಜನಿಕವಾಗಿ ಥಳಿಸಿ ಹತ್ಯೆಗೈದಿತ್ತು, ಹಾಗೂ ಆತನ ವಾಹನಕ್ಕೆ ಬೆಂಕಿಯಿಟ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ