
ರಾಂಚಿ(ಡಿ.11) : ರಾಂಚಿಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಹಿರಿಯ ಮುಖಂಡರಾದ ಸಿಮೋನ್ ಮರಂಡಿ ಅವರು ಬುಡಕಟ್ಟು ಜನಾಂಗಕ್ಕಾಗಿ ಆಯೋಜಿಸಿದ್ದ ಕಿಸ್ಸಿಂಗ್ ಕಾಂಪಿಟೇಷನ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಅವರ ಕ್ಷೇತ್ರವಾದ ಲಿಟ್ಟಿಪರಾ ಪ್ರದೇಶದ ತಲ್ಪಹರಿಯಲ್ಲಿ ಸಿಮೋನ್ ಮರಂಡಿ ಶನಿವಾರ ರಾತ್ರಿ ಈ ರೀತಿಯಾದ ವಿವಾದಾತ್ಮಕವಾದ ಸ್ಪರ್ಧೆಯೊಂದನ್ನು ಆಯೋಜನೆ ಮಾಡಿದ್ದರು ಎನ್ನಲಾಗಿದೆ.
ಈ ಸ್ಪರ್ಧೆಯಲ್ಲಿ ಮೂರು ಜೋಡಿಗೆ ಬಹುಮಾನವನ್ನು ವಿತರಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಸಿಮೋನ್ ಮರಂಡಿ ಆಧುನಿಕತೆ ಹಾಗೂ ಪ್ರೀತಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ರೀತಿಯಾದ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು.
ಬುಡಕಟ್ಟು ಜನಾಂಗದ ಜನರು ಹೆಚ್ಚು ನಾಚಿಕೆ ಸ್ವಭಾವದವರು. ಅವರಿಂದ ಇಂತಹ ಸ್ವಭಾವವನ್ನು ದೂರ ಮಾಡಲು ಹಾಗೂ ದಂಪತಿ ನಡುವೆ ಹೆಚ್ಚಿನ ತಿಳುವಳಿಕೆ ಮೂಡಿಸಲು ಹಾಗೂ ವಿಚ್ಛೇದನವನ್ನು ಕಡಿಮೆ ಮಾಡುವ ಸಲುವಾಗಿ ಕಾರ್ಯಕ್ರಮ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಆದರೆ ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದಕ್ಕೆ ಅನೇಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಾವ ವಿಚಾರವನ್ನು ತಿಳಿಸುತ್ತಿದ್ದಾರೆ. ಇದರಿಂದ ಬುಡಕಟ್ಟು ಜನಾಂಗದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಹಾಳುಗೆಡವುತ್ತಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.