ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲ: ಟೌನ್’ಹಾಲ್ ಮುಂದೆ ಜಿಗ್ನೇಶ್ ಮೇವಾನಿ ಪ್ರತಿಭಟನೆ

Published : Apr 04, 2018, 06:14 PM ISTUpdated : Apr 14, 2018, 01:14 PM IST
ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲ: ಟೌನ್’ಹಾಲ್ ಮುಂದೆ ಜಿಗ್ನೇಶ್ ಮೇವಾನಿ ಪ್ರತಿಭಟನೆ

ಸಾರಾಂಶ

ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲಗೊಳಿಸಿರುವ  ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ   ಟೌನ್ ಹಾಲ್ ಎದುರು  ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ  ಪ್ರತಿಭಟನೆ ನಡೆಸುತ್ತಿದೆ. 

ಬೆಂಗಳೂರು (ಏ. 04): ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲಗೊಳಿಸಿರುವ  ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ   ಟೌನ್ ಹಾಲ್ ಎದುರು  ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ  ಪ್ರತಿಭಟನೆ ನಡೆಸುತ್ತಿದೆ. 

ಪ್ರತಿಭಟನೆಯಲ್ಲಿ ಜಿಗ್ನೇಶ್ ಮೇವಾನಿ, ಬಿಟಿ ಲಲಿತಾ ನಾಯಕ್, ಸಿರಿಮನೆ ನಾಗರಾಜ್ ಭಾಗಿಯಾಗಿದ್ದಾರೆ.  ದಲಿತ ದೌರ್ಜನ್ಯ ತಡೆ ಕಾಯ್ದೆ ಬದಲಾವಣೆ ಆದೇಶ ಹೊರಬೀಳುತ್ತಿದ್ದಂತೆ ಹೋರಾಟಗಳು ಶುರುವಾಗಿತ್ತು.  ಸುಪ್ರೀಂಕೋರ್ಟ್  ಆದೇಶದ ಬೆನ್ನಲ್ಲೇ  ದಲಿತ ಪರ ಸಂಘಟನೆಗಳು ಪ್ರತಿಭಟನೆಗಿಳಿದಿದ್ದವು.  ಕಳೆದ ಸೋಮವಾರ ದಲಿತ ಸಂಘಟನೆಗಳ ಬಂದ್ ಕರೆ ವೇಳೆ ಅವಘಡ ಸಂಭವಿಸಿದ್ದು  9 ಮಂದಿ ದಲಿತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದರು.   ಹೀಗಾಗಿ ಕೇಂದ್ರ ಸರ್ಕಾರ ದಲಿತ ವಿರೋಧಿ ಎಂದು ದಲಿತ ಸಂಘಟನೆಗಳು  ಆಕ್ರೋಶ ವ್ಯಕ್ತಪಡಿಸಿವೆ.  ಟೌನ್ ಹಾಲ್ ಎದುರು  ಕೇಂದ್ರ ಸರ್ಕಾರದ ವಿರುದ್ಧ  ಘೋಷಣೆ ಕೂಗುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!