
ನವದೆಹಲಿ : ಎಲ್ಲಾ ಟೆಲಿಕಾಂ ಸಂಸ್ಥೆಯ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್.
ಸರ್ಕಾರ ಎಲ್ಲಾ ಟೆಲಿಕಾಂ ಸಂಸ್ಥೆಗಳಿಗೆ ಖಡಕ್ ಆದೇಶವೊಂದನ್ನು ಹೊರಡಿಸಿದೆ. ಇದರಿಂದ ಗ್ರಾಹಕರಿಗೆ ಸಾಕಷ್ಟು ಅನುಕೂಲ ಒದಗಲಿದೆ.
ಯಾವುದೇ ಟೆಲಿಕಾಂ ಸಂಸ್ಥೆಯು ತನ್ನ ಸೇವೆಯನ್ನು ಬಂದ್ ಮಾಡುವುದಿದ್ದಲ್ಲಿ 30 ದಿನಗಳ ಮುಂಚೆಯೇ ನೋಟಿಸ್ ನೀಡಬೇಕು ಎಂದು ಸೂಚನೆಯನ್ನು ನೀಡಿದೆ.
ಈ ಹಿಂದೆ ಅನೇಕ ಟೆಲಿಕಾಂ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ಯಾವುದೇ ರೀತಿಯ ಮುಂಚಿತ ಮಾಹಿತಿ ನೀಡದೇ ತಮ್ಮ ಸೇವೆಗಳನ್ನು ಬಂದ್ ಮಾಡಿದ್ದು ಇದರಿಂದ ಗ್ರಾಹಕರು ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಹಾಗೂ ಟೆಲಿಕಾಂ ಸಂಸ್ಥೆಗಳು ಸಭೆಯನ್ನು ನಡೆಸಿ ಈ ತೀರ್ಮಾನ ಕೈಗೊಂಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.