ಜೈಪುರ ಸಾಹಿತ್ಯ ಉತ್ಸವಕ್ಕೆ ನಸ್ರೀನ್'ಗಿಲ್ಲ ಆಹ್ವಾನ

Published : Jan 24, 2017, 01:03 PM ISTUpdated : Apr 11, 2018, 01:10 PM IST
ಜೈಪುರ ಸಾಹಿತ್ಯ ಉತ್ಸವಕ್ಕೆ ನಸ್ರೀನ್'ಗಿಲ್ಲ ಆಹ್ವಾನ

ಸಾರಾಂಶ

ನಸ್ರೀನ್ ಅವರ ಹೇಳಿಕೆ ಖಂಡಿಸಿ ರಾಜಸ್ಥಾನ ಮುಸ್ಲಿಂ ಫೋರಂ, ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್, ಜಮಾತ್-ಇ-ಇಸ್ಲಾಮಿ ಮತ್ತು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿಭಟಿಸಿತ್ತು.

ಜೈಪುರ(ಜ.24): ಬಾಂಗ್ಲಾದ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಅವರನ್ನು ಮುಂದಿನ ವರ್ಷದ ಜೈಪುರ ಸಾಹಿತ್ಯ ಉತ್ಸವಕ್ಕೆ ಆಹ್ವಾನಿಸುವುದಿಲ್ಲ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ನಡೆದ ಸಾಹಿತ್ಯೋತ್ಸವದಲ್ಲಿ ನಸ್ರೀನ್ ಅವರ ಏಕರೂಪ ನಾಗರಿಕ ಸಂಹಿತೆ ಕುರಿತ ಹೇಳಿಕೆ ಪ್ರತಿಭಟನೆಗೆ ಕಾರಣವಾಗಿತ್ತು. ‘‘ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಎಲ್ಲಾ ರೀತಿಯಲ್ಲೂ ಅಲ್ಪಸಂಖ್ಯಾತರನ್ನು ನಾವು ಬೆಂಬಲಿಸುತ್ತಿದ್ದೇವೆ, ಅವರ ಎಲ್ಲಾ ಅಭಿಪ್ರಾಯಗಳಿಗೂ ಇದು ವೇದಿಕೆಯಾಗಿದೆ ಎಂದು ತಿಳಿಸಿದ್ದೇವೆ. ಮುಂದಿನ ಉತ್ಸವಕ್ಕೆ ಅವರಿಗೆ ಆಹ್ವಾನ ನೀಡಬಾರದೆಂಬ ಪ್ರತಿಭಟನಾಕಾರರ ಮನವಿಯನ್ನು ಪುರಸ್ಕರಿಸುತ್ತೇವೆ,’’ ಎಂದು ಜೆಎಲ್‌ಎಫ್ ಆಯೋಜಕ ಸಂಜಯ್ ಸ್ಪಷ್ಟಪಡಿಸಿದ್ದಾರೆ.

ನನಗೆ ರಾಷ್ಟ್ರೀಯತೆ, ಧಾರ್ಮಿಕ ಮೂಲಭೂತವಾದಿಗಳ ಮೇಲೆ ನಂಬಿಕೆಯಿಲ್ಲ. ನನಗೆ ವಿಚಾರವಾದ, ಮಾನವೀಯತೆ, ಸ್ವಾತಂತ್ರ್ಯ, ಹಕ್ಕುಗಳನ್ನು ಮುಕ್ತವಾಗಿ ನೀಡುವ ಜಗತ್ತಿನ ಬಗ್ಗೆ ವಿಶ್ವಾಸವಿದೆ. ಎಲ್ಲಿಯವರೆಗೆ ಇಸ್ಲಾಂ ರಾಷ್ಟ್ರಗಳು ಟೀಕೆಗಳನ್ನು ಒಪ್ಪುವುದಿಲ್ಲವೋ, ಅಲ್ಲಿಯವರೆಗೆ ಇಸ್ಲಾಂ ರಾಷ್ಟ್ರಗಳನ್ನು ಜಾತ್ಯಾತೀತ ರಾಷ್ಟ್ರಗಳೆಂದು ಕರೆಯಲು ಸಾಧ್ಯವಿಲ್ಲ. ನಾನು ಇಸ್ಲಾಂ ಧರ್ಮದ ಹುಳುಕುಗಳನ್ನು ಟೀಕಿಸಿದಾಗ ಜನರು ನನ್ನನ್ನು ಕೊಲ್ಲಲು ಬಯಸುತ್ತಾರೆ ಎಂದು ತಸ್ಲೀಮಾ ಹೇಳಿದ್ದರು.  

ನಸ್ರೀನ್ ಅವರ ಹೇಳಿಕೆ ಖಂಡಿಸಿ ರಾಜಸ್ಥಾನ ಮುಸ್ಲಿಂ ಫೋರಂ, ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್, ಜಮಾತ್-ಇ-ಇಸ್ಲಾಮಿ ಮತ್ತು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿಭಟಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?