ದೆಹಲಿ ಜೆಎನ್​ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪತ್ತೆಗೆ ಆಗ್ರಹಿಸಿ ಪ್ರತಿಭಟನೆ

Published : Nov 06, 2016, 12:52 PM ISTUpdated : Apr 11, 2018, 12:43 PM IST
ದೆಹಲಿ ಜೆಎನ್​ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪತ್ತೆಗೆ ಆಗ್ರಹಿಸಿ ಪ್ರತಿಭಟನೆ

ಸಾರಾಂಶ

ದೆಹಲಿಯ ಜೆಎನ್​ಯುನಲ್ಲಿ ನಾಪತ್ತೆಯಾಗಿರುವ ವಿದ್ಯಾರ್ಥಿ ನಜೀಬ್ ಪತ್ತೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧರಣಿಯಲ್ಲಿ ಕಾಣೆಯಾಗಿರುವ ವಿದ್ಯಾರ್ಥಿ ನಜೀಬ್​ ತಾಯಿ ಭಾಗಿಯಾದರು.

ದೆಹಲಿ (ನ.06): ದೆಹಲಿಯ ಜೆಎನ್​ಯುನಲ್ಲಿ ನಾಪತ್ತೆಯಾಗಿರುವ ವಿದ್ಯಾರ್ಥಿ ನಜೀಬ್ ಪತ್ತೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧರಣಿಯಲ್ಲಿ ಕಾಣೆಯಾಗಿರುವ ವಿದ್ಯಾರ್ಥಿ ನಜೀಬ್​ ತಾಯಿ ಭಾಗಿಯಾದರು.

ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಮುಂದಾಗಿದ್ದು ಈ ವೇಳೆ ಪೊಲೀಸರು-ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ನಜೀಬ್​​ ತಾಯಿ ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ನಜೀಬ್​​ ತಾಯಿಯನ್ನು ಬಂಧಿಸಿ ಧರಣಿ ಸ್ಥಳದಿಂದ ಎಳೆದೊಯ್ದ ಪೊಲೀಸರ ಕ್ರಮ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಗೊಳಿಸಲಾಗಿದೆ.

ನಡೆದಿದ್ದೇನು?

ಎಬಿವಿಪಿ ಸಂಘಟನೆಯೊಂದಿಗೆ ನಜೀಬ್ ಜಗಳ ಮಾಡಿಕೊಂಡಿದ್ದು ಹಾಸ್ಟೆಲ್‌ಗೆ ನುಗ್ಗಿ ಆತನ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದರು. ನಜೀಬ್ ಎಂಎಸ್ಸಿ ಬಯೋಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಯಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS