ತೆರಿಗೆದಾರರ ಋಣ ತೀರಿಸಿದ್ದೇನೆ: Ph.D ಮುಗಿಸಿದ ಉಮರ್!

Published : May 15, 2019, 01:56 PM ISTUpdated : May 15, 2019, 01:59 PM IST
ತೆರಿಗೆದಾರರ ಋಣ ತೀರಿಸಿದ್ದೇನೆ: Ph.D ಮುಗಿಸಿದ ಉಮರ್!

ಸಾರಾಂಶ

Ph.D ಪದವಿ ಮುಗಿಸಿದ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲೀದ್| ಉಗ್ರ ಅಫ್ಜಲ್ ಗುರು ಪರ ಘೋಷಣೆ ಕೂಗಿದ ಆರೋಪ ಹೊತ್ತಿದ್ದ ಉಮರ್| ತೆರಿಗೆದಾರರ ಋಣ ತೀರಿಸಿದ್ದೇನೆ ಎಂದ ಉಮರ್ ಖಾಲೀದ್| ಮೋದಿ ಯಾವಾಗ ದೇಶದ ಋಣ ತೀರಿಸುತ್ತಾರೆ ಎಂದು ಕೇಳಿದ ಉಮರ್| ಸಂಕಷ್ಟದ ದಿನಗಳಲ್ಲಿ ಸಹಾಯಕ್ಕೆ ಬಂದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಉಮರ್|

ನವದೆಹಲಿ(ಮೇ.15): ಉಗ್ರ ಅಫ್ಜಲ್ ಗುರು ಪರ ಘೋಷಣೆ ಕೂಗಿದ ಆರೋಪ ಹೊತ್ತಿರುವ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲೀದ್ ಕೊನೆಗೂ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಫೋಟೋ ಶೇರ್ ಮಾಡಿರುವ ಉಮರ್ ಖಾಲೀದ್, ತಾವು Ph.D ಪದವಿ ಪಡೆದಿದ್ದು, ದೇಶದ ತೆರಿಗೆದಾರರ ಋಣ ತೀರಿಸಿದ್ದಾಗಿ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಕುರಿತು ..‘ನೀವು ಯಾವಾಗ ದೇಶದ ತೆರಿಗೆದಾರರ ಋಣ ತೀರಿಸುತ್ತೀರಿ..’ಎಂದು ಉಮರ್ ಖಾಲೀದ್ ಪ್ರಶ್ನಿಸಿದ್ದಾರೆ.

ಇದೇ ವೇಳೆ ಸಂಕಷ್ಟದ ದಿನಗಳಲ್ಲಿ ತಮ್ಮ ಸಹಾಯಕ್ಕೆ ಬಂದ ಎಲ್ಲರಿಗೂ ಧನ್ಯವಾದ ಸಲ್ಲಿಸಿರುವ ಉಮರ್ ಖಾಲೀದ್, ದೇಶಕ್ಕಾಗಿ ದುಡಿಯುವ ತಮ್ಮ ನಿರ್ಧಾರ ಅಚಲ ಎಂದು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!