ಮಹಾಭಾರತ ಕಾಲದಲ್ಲೇ ಪತ್ರಿಕೋದ್ಯಮ ಅಸ್ತಿತ್ವದಲ್ಲಿತ್ತಾ?

Published : Jun 01, 2018, 11:06 AM IST
ಮಹಾಭಾರತ ಕಾಲದಲ್ಲೇ  ಪತ್ರಿಕೋದ್ಯಮ ಅಸ್ತಿತ್ವದಲ್ಲಿತ್ತಾ?

ಸಾರಾಂಶ

ಆಧುನಿಕ ಜಗತ್ತಿನ ಅನ್ವೇಷಣೆಗಳನ್ನು ಪುರಾತನ ಕಾಲದೊಂದಿಗೆ ಜೋಡಿಸುವ ಬಿಜೆಪಿಗರ ಹೇಳಿಕೆಗಳು ಮುಂದುವರೆದಿದ್ದು, ಪತ್ರಿಕೋದ್ಯಮ ಎನ್ನುವುದು ಮಹಾಭಾರತದಲ್ಲಿಯೇ ಅಸ್ತಿತ್ವದಲ್ಲಿತ್ತು ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಹೇಳಿದ್ದಾರೆ.

ಮಥುರಾ (ಜೂ. 01):  ಆಧುನಿಕ ಜಗತ್ತಿನ ಅನ್ವೇಷಣೆಗಳನ್ನು ಪುರಾತನ ಕಾಲದೊಂದಿಗೆ ಜೋಡಿಸುವ ಬಿಜೆಪಿಗರ ಹೇಳಿಕೆಗಳು ಮುಂದುವರೆದಿದ್ದು, ಪತ್ರಿಕೋದ್ಯಮ ಎನ್ನುವುದು ಮಹಾಭಾರತದಲ್ಲಿಯೇ ಅಸ್ತಿತ್ವದಲ್ಲಿತ್ತು ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಹೇಳಿದ್ದಾರೆ.

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರ್ಮಾ, ಪತ್ರಿಕೋದ್ಯಮದ ಹುಟ್ಟಿನ ಬಗೆಗಿನ ಈಗಿರುವ ಪ್ರತಿಪಾದನೆಗಳನ್ನು ಅಲ್ಲಗಳೆದು, ಇದು ಮಹಾಭಾರತ ಕಾಲದಲ್ಲಿಯೇ ಅಸ್ತಿತ್ವದಲ್ಲಿತ್ತು’ ಎಂದಿದ್ದಾರೆ. ‘ಮಹಾಭಾರತದ ಪೌರಾಣಿಕ ಪಾತ್ರದಲ್ಲಿ ಸಂಜಯ, ಹಸ್ತಿನಾಪುರದಲ್ಲಿಯೇ ಕುಳಿತು ಅಂದ ದೃತರಾಷ್ಟ್ರನಿಗೆ ಕುರುಕ್ಷೇತ್ರದ ಸನ್ನಿವೇಶವನ್ನು ಹೇಳುತ್ತಿದ್ದ. ಇದು ನೇರಪ್ರಸಾರ ಅಲ್ಲದಿದ್ದರೆ ಮತ್ತೇನು?’ ಎಂದು ಶರ್ಮಾ ಪ್ರಶ್ನಿಸಿದ್ದಾರೆ. ಅಲ್ಲದೆ ನಾರದನನ್ನು ಗೂಗಲ್‌ಗೆ ಹೋಲಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!