ಪತ್ರಕರ್ತೆ ಗೌರಿ ಲಂಕೇಶ್‌ಗೆ ಜಾಮೀನು ಮಂಜೂರು

Published : Oct 01, 2016, 02:43 PM ISTUpdated : Apr 11, 2018, 12:53 PM IST
ಪತ್ರಕರ್ತೆ ಗೌರಿ ಲಂಕೇಶ್‌ಗೆ ಜಾಮೀನು ಮಂಜೂರು

ಸಾರಾಂಶ

10 ಸಾವಿರ ರೂಪಾಯಿ ಶ್ಯೂರಿಟಿ, ಮತ್ತು 25 ಸಾವಿರ ಬಾಂಡ್ ಪಡೆದು ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿದೆ

ಹುಬ್ಬಳ್ಳಿ(ಅ.01): ಮಾನನಷ್ಟ ಮೊಕದ್ದಮೆ ಆರೋಪದಡಿ ಬಂಧನವಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್‌ಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಎರಡನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಗೌರಿ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

10 ಸಾವಿರ ರೂಪಾಯಿ ಶ್ಯೂರಿಟಿ, ಮತ್ತು 25 ಸಾವಿರ ಬಾಂಡ್ ಪಡೆದು ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿದೆ. 2007ರಲ್ಲಿ `ದರೋಡೆಗಿಳಿದ ಬಿಜೆಪಿಗಳು' ಎಂಬ ತಲೆ ಬರಹದಡಿಯಲ್ಲಿ ಸಂಸದ ಪ್ರಹ್ಲಾದ್ ಜೋಷಿ ಅವರ ಕುರಿತು ಪತ್ರಕರ್ತೆ ಗೌರಿ ಲಂಕೇಶ್ ಲೇಖನವೊಂದು ಪ್ರಕಟಿಸಿದ್ದರು. ಈ ಸಂಬಂಧ ಗೌರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಆದರೆ, ಇದರ ವಿಚಾರಣೆಗೆ ಗೌರಿ ಎರಡು ಬಾರಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ಬಂಧನ ವಾರೆಂಟ್ ಜಾರಿಯಾಗಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಖುದ್ದು ಹಾಜರಾಗುವಂತೆ ಸಂಸದ ಪ್ರಹ್ಲಾದ್ ಜೋಷಿ ಅವರಿಗೂ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?