
ಪಾಟ್ನಾ(ಮಾ.26): ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪತ್ರಕರ್ತರು ಮೃತಪಟ್ಟ ಘಟನೆ ಬಿಹಾರದ ಬೋಜ್'ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸ್ಥಳೀಯ ಹಿಂದಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಹಾಗೂ ವಿಜಯ್ ಸಿಂಗ್ ಮೃತರು. ಆದಾಗ್ಯೂ ಮೃತರ ಪೋಷಕರು ತಮ್ಮ ಮಕ್ಕಳ ಸಾವಿಗೆ ಗ್ರಾಮದ ಮಾಜಿ ಮುಖ್ಯಸ್ಥನೆ ಕಾರಣ ಎಂದು ಆರೋಪಿಸಿದ್ದಾರೆ. ಅಹಮದ್ ಅಲಿಯಾಸ್ ಹರಸು ಎಂಬಾತನೆ ಕಾರಣ ಎಂದು ಆರೋಪಿಸಿದ್ದಾರೆ.
ವಿವಾದವೊಂದಕ್ಕೆ ಸಂಬಂಧಿಸಿದಂತೆ ಅಹಮದ್ ಅಲಿಯಾಸ್ ಹರಸು ಎಂಬಾತನ ಜೊತೆ ವಾಗ್ಆದ ನಡೆಸಿದ ಕೆಲ ಹೊತ್ತಿನಲ್ಲೆ ಆತನಿಗೆ ಸೇರಿದ ಕಾರು ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಮುಖಂಡನ ಮನೆಯನ್ನು ಸುಟ್ಟು ಹಾಕಿದ್ದಾರೆ. ಹಳ್ಳಿಯಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು, ಪೊಲೀಸರು ಬಿಗಿಭದ್ರತೆ ಕೈಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.