
ಬೆಂಗಳೂರು[ಜೂ.19]: ಹಿಂದು ದೇವತೆಗಳ ವಿರುದ್ಧ ಫೇಸ್'ಬುಕ್'ನಲ್ಲಿ ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರು ಬಸೀರ್ ಅಡ್ಯಾರ್ ಬಸೀರ್ ಮತ್ತು ರಂಗನಾಥ್ ಶಾಂಘವಿ ಎಂಬುವವರ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಸೀರ್ ಅಡ್ಯಾರ್ ಬಸೀರ್ ಮತ್ತು ರಂಗನಾಥ್ ಶಾಂಘವಿ ಎಂಬುವವರು ಪಾರ್ವತಿ, ಸೀತೆ, ಲಕ್ಷ್ಮೀ ಮತ್ತು ಶಿವನ ಫೋಟೋಗಳನ್ನು ತೀರ ವಿಕೃತವಾಗಿ ಚಿತ್ರಿಸಿ ತಮ್ಮ ಫೇಸ್'ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಿಂದು ದೇವತೆಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ.
ಈ ಪೋಸ್ಟ್'ಗಳಿಂದ ಕೋಮು ಸಾಮರಸ್ಯ ಹಾಳಾಗುವುದರ ಜೊತೆಗೆ ಸಮಾಜದಲ್ಲಿ ಗಲಭೆಗಳಿಗೆ ಪ್ರಚೋದನೆ ಉಂಟಾಗುವ ಸಾಧ್ಯತೆಯಿರುತ್ತದೆ. ಸಾಮರಸ್ಯ ಹಾಳು ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.