
ಪಾಟ್ನ(ಸೆ.07): ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ನಡೆದು 2 ದಿನವೂ ಕಳೆದಿಲ್ಲ ಆಗಲೇ ಮತ್ತೊಬ್ಬ ಪತ್ರಕರ್ತನ ಮೇಲೆ ಗುಂಡಿನ ದಾಳಿಯಾಗಿದೆ.
ಬಿಹಾರದ ಆರ್ವಾಲ್ ಜಿಲ್ಲೆಯಲ್ಲಿ ಹಿಂದಿ ಪತ್ರಿಕೆ ರಾಷ್ಟ್ರೀಯ ಸಹರಾ'ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಂಕಜ್ ಮಿಶ್ರಾ ಎಂಬುವವರ ಮೇಲೆ 2 ಬೈಕಿನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಮಿಶ್ರಾ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಪಾಟ್ನ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿದೆ.
ಗೌರಿ ಲಂಕೇಶ್ ಅವರ ಹತ್ಯೆ ನಡೆದು 2 ದಿನವೂ ಕಳೆದಿಲ್ಲ ಆಗಲೇ ಮತ್ತೊಬ್ಬ ಪತ್ರಕರ್ತನ ಮೇಲೆ ದಾಳಿಯಾಗಿರುವುದಕ್ಕೆ ಪತ್ರಿಕಾ ಲೋಕ ದಿಗ್ಭ್ರಮೆ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.