
ನವದೆಹಲಿ (ನ.30): ಬೈಕ್'ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಪತ್ರಕರ್ತರೊಬ್ಬರನ್ನು ದಾರುಣವಾಗಿ ಶೂಟ್ ಮಾಡಿರುವ ಘಟನೆ ಕಾನ್ಪುರದ ಬಿಲ್'ಹೌರ್'ನಲ್ಲಿ ನಡೆದಿದೆ.
ಹಿಂದೂಸ್ಥಾನ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ನವೀನ್ ಗುಪ್ತಾ ಹತ್ಯೆಯಾದವರು. ಮೂತ್ರ ವಿಸರ್ಜನೆಗೆ ಹೊರ ಬಂದ ಸಂದರ್ಭದಲ್ಲಿ ಬೈಕ್'ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ನವೀನ್ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಮುಖ ಹಾಗೂ ಹೊಟ್ಟೆಯ ಭಾಗಕ್ಕೆ 5 ಗುಂಡುಗಳು ಹೊಕ್ಕಿದ್ದು, ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ನವೀನ್ ನೆರವಿಗೆ ಕೂಡಲೇ ಅವರ ಸಹೋದರ ಹಾಗೂ ಸ್ಥಳೀಯರು ಧಾವಿಸಿದರು. ಆಸ್ಪತ್ರೆಗೆ ಕೊಂಡೊಯ್ಯುವಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.
ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ 4 ವರ್ಷದ ಮಗನನ್ನು ಅಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.