
ರೋಹ್ತಾಸ್ (ಬಿಹಾರ): ಬಿಹಾರದ ರೊಹ್ತಾಸ್ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪ್ರಮುಖ ಹಿಂದಿ ದಿನಪತ್ರಿಕೆಯ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ದೈನಿಕ ಜಾಗರಣ್ ಪತ್ರಿಕೆಯ ವರದಿಗಾರನಾಗಿದ್ದ ಧರ್ಮೇಂದ್ರ ಸಿಂಗ್ ತಮ್ಮ ನಿವಾಸದ ಚಹಾ ಅಂಗಡಿ ಬಳಿ ನಿಂತಿದ್ದಾಗ, ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ವಾರಣಾಸಿಗೆ ಕೊಂಡೊಯ್ಯುತ್ತಿರುವ ವೇಳೆ ದಾರಿ ಮಧ್ಯೆಯೇ ಧರ್ಮೇಂದ್ರ ಸಿಂಗ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಕಳೆದ ಅಕ್ಟೋಬರ್’ನಲ್ಲಿ, ಹೇಮ ತ್ ಯಾದವ್ ಎಂಬ ಟಿವಿ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶದಲ್ಲಿ ಇದೇ ರಿತಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.