
ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಪತನ ಹಂತದಲ್ಲಿರುವ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ಸರ್ಕಸ್ ಮಾಡುತ್ತಿದ್ದರೆ, ಅಧಿಕಾರ ಹಿಡಿಯುವ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ. ವಿಶ್ವಾಸಮತ ಸಾಬೀತುಪಡಿಸುವಂತೆ ರಾಜ್ಯಪಾಲರು ನೀಡಿದ ಎರಡನೇ ಗಡುವಿಗೂ ಸಿಎಂ ಕುಮಾರಸ್ವಾಮಿ ಸಡ್ಡು ಹೊಡೆದಿದ್ದಾರೆ.
ರಾಜ್ಯಪಾಲ ವಾಜು ಬಾಯಿ ವಾಲಾ ನಡೆಯ ವಿರುದ್ಧವೇ ಸಿಎಂ ಕುಮಾರಸ್ವಾಮಿ ಸಿಎಂ ಸುಪ್ರೀಂ ಕದ ತಟ್ಟಿದ್ದಾರೆ. ರಾಜ್ಯಪಾಲರೂ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಮುಂದಿನ ನಡೆ, ಕೇಂದ್ರದ ನಿರ್ಧಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಏನಾಗಲಿದೆ ಎಂಬುದು ಸೋಮವಾರ ಗೊತ್ತಾಗಲಿದೆ. ಎಲ್ಲರ ಚಿತ್ರ ರಾಜಭವನದತ್ತ ನೆಟ್ಟಿದೆ.
ರಾಜ್ಯ ರಾಜಕಾರಣದ ಪ್ರಹಸನಗಳನ್ನು ನೋಡಿ ನೋಡಿ ಜನರ ಬೇಸತ್ತಿದ್ದಾರೆ. ಮಾಧ್ಯಮಗಳಲ್ಲಿ ಕಳೆದ ಒಂದು ವಾರಗಳಿಂದ ಇದೇ ಸುದ್ದಿ. ಎಲ್ಲಾ ಕಡೆ ಬರೀ ಇದೇ ಸುದ್ದಿಗಳು. ದಿನವಿಡೀ ರಾಜಕೀಯ ಹೈಡ್ರಾಮದ ವರದಿಗಳನ್ನು ಮಾಡಿ ಮಾಡಿ, ರಾಜಕಾರಣಿಗಳಿಗೆ ಮೈಕ್ ಹಿಡಿದು ಹಿಡಿದು ಸಾಕಾಗಿ ಹೋಗಿರುವ ಪತ್ರಕರ್ತೆಯರಿಬ್ಬರೂ ರಾಜ್ಯದ ರಾಜಕಾರಣಕ್ಕೆ ಸಂಬಂಧಿಸಿದ ಟಿಕ್ ಟಾಕ್ ವಿಡೀಯೋವನ್ನು ಮಾಡಿದ್ದಾರೆ. ವಿಧಾನಸೌಧದ ಮುಂದೆ ನಿಂತು ‘ದೇಶದ ಕಥೆ ಇಷ್ಟೇ ಕಣಣ್ಣೋ... ಚಿಂತೆ ಮಾಡಿ ಲಾಭ ಇಲ್ಲಣ್ಣೋ’ ಹಾಡಿಗೆ ಟಿಕ್ ಮಾಡಿದ್ದು ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ಪಡೆದುಕೊಂಡಿದೆ. ಈ ವಿಡಿಯೋದಲ್ಲಿರುವವರೊಬ್ಬರು ಸುವರ್ಣ ನ್ಯೂಸ್ ಪ್ರತಿನಿಧಿ ರಕ್ಷಾ ಹಾಗೂ ಇನ್ನೊಬ್ಬರು ಟಿವಿ 5 ಪ್ರತಿನಿಧಿ ಅರ್ಚನಾ ಎನ್ನುವುದು ವಿಶೇಷ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.