
ಬೆಂಗಳೂರು(ಫೆ.14): ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಎಫ್'ಐಆರ್ ದಾಖಲಿಸಲು ಆರ್ಥಿಕ ಅಪರಾಧಗಳ ಘಟಕದ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ.
ಕೆಲವು ತಿಂಗಳ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ವೇಳೆ ಕೊಟ್ಯಂತರ ಮೊತ್ತದ ದಾಖಲೆ ಇಲ್ಲದ ಆಸ್ತಿ ಪತ್ತೆಯಾಗಿತ್ತು. ದಾಖಲೆಗಳನ್ನ ನಾಶ ಮಾಡಿದ ಆರೋಪದ ಮೇಲೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಮಾರ್ಚ್ 22ರ ಒಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕು. ಕೋರ್ಟ್'ಗೆ ಹಾಜರಾಗದಿದ್ದರೆ ಬಂಧನ ಸಾಧ್ಯತೆಯಿದೆ. ನ್ಯಾಯಾಧೀಶರೆ ಅನುಮತಿ ನೀಡಿರುವುದರಿಂದ ಸಚಿವರಿಗೆ ಸಂಕಷ್ಟ ಎದುರಾಗಿದೆ.
ಆರ್ಥಿಕ ಅಪರಾಧಗಳ ಘಟಕದ ನ್ಯಾಯಾಧೀಶರಾದ ಶಾಂತಪ್ಪ ಆಳ್ವ ಅನುಮತಿ ನೀಡಿದ್ದಾರೆ. ಐಟಿ ದಾಳಿಯ ವೇಳೆ ಸಚಿವರು ಕೆಲವು ಮಹತ್ವ ಮಾಹಿತಿಯುಳ್ಳ ಕಾಗದಗಳನ್ನು ಹರಿದು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.