
ಚಂಡೀಗಢ(ಆ.31): ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್'ಗೆ 20 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಸಿಬಿಐ ಕೋರ್ಟ್ ನ್ಯಾಯಾಧೀಶ ಜಗದೀಪ್ ಸಿಂಗ್ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದೆ.
ರಾಮ್ ರಹೀಂ ದೋಷಿ ಎಂದು ತೀರ್ಪು ಬಂದ ಬಳಿಕ ಜಗದೀಪ್ ಸಿಂಗ್ ಮತ್ತು ಅವರ ಕುಟುಂಬ ಸದಸ್ಯರಿಗೆ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರಿಗೆ ಅತ್ಯಧಿಕ ಭದ್ರತೆ ಕಲ್ಪಿಸಿದೆ. ರಾಮ್ ರಹೀಂ ವಿರುದ್ಧ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಸಿಬಿಐ ಕೋರ್ಟ್ ನ್ಯಾಯಾಧೀಶರನ್ನು ಹೆಲಿಕಾಪ್ಟರ್ ಮೂಲಕ ರೋಹ್ತಕ್'ಗೆ ಕರೆದೊಯ್ಯಲಾಗಿತ್ತು.
ಝಡ್ ಪ್ಲಸ್ ಭದ್ರತೆ ಇದ್ದವರಿಗೆ 55 ಭದ್ರತಾ ಸಿಬ್ಬಂದಿ ಇರುತ್ತಾರೆ. ಇದರಲ್ಲಿ 10 ಎನ್'ಎಸ್'ಜಿ ಕಮಾಂಡೋಗಳಿರುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.