
ಡೆಹ್ರಾಡೂನ್[ಆ.15]: ಡಿಸ್ಕವರಿ ಚಾನಲ್ನಲ್ಲಿ ಪ್ರಸಾರವಾದ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಖ್ಯಾತ ಸಾಹಸಿಗ ಬೆಯರ್ ಗ್ರಿಲ್ಸ್ ಉತ್ತರಾಖಂಡದ ಜಿಮ್ ಕಾರ್ಬೆಟ್ ಅರಣ್ಯದಲ್ಲಿ ಸುತ್ತಾಡಿದ ಸ್ಥಳಗಳು ‘ಮೋದಿ ಕಾಲುದಾರಿ‘ ಮಾರ್ಗವನ್ನಾಗಿ ಅಭಿವೃದ್ಧಿಪಡಿಸಲು ಉತ್ತರಾಖಂಡ ಸರ್ಕಾರ ಉದ್ದೇಶಿಸಿದೆ.
ಪ್ರವಾಸೋದ್ಯಮ ಉತ್ತೇಜನದ ನಿಟ್ಟಿನಿಂದ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಕಾಲುದಾರಿಯನ್ನು ಅಭಿವೃದ್ಧಿಪಡಿಸಲಾಗುವುದು. ಈ ಮಾರ್ಗಕ್ಕೆ ಪ್ರತ್ಯೇಕವಾದ ಗುರುತು ನೀಡಲಾಗುವುದು. ಜಿಮ್ ಕಾರ್ಬೆಟ್ ಅರಣ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಮೋದಿ ಹೋದ ಕಾಲುದಾರಿಯಲ್ಲಿ ಸುತ್ತಾಡಬಹುದಾಗಿದೆ ಎಂದು ಉತ್ತರಾಖಂಡ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಹೇಳಿದ್ದಾರೆ.
ಡಿಸ್ಕವರಿ ಚಾನಲ್ನಲ್ಲಿ ಆ.12ರಂದು ರಾತ್ರಿ 9 ಗಂಟೆಗೆ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ಕಾರ್ಯಕ್ರಮವನ್ನು ವಿಶ್ವದ 180 ದೇಶಗಳಲ್ಲಿ ಪ್ರಸಾರ ಮಾಡಲಾಗಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.