
ನವದೆಹಲಿ (ಫೆ.04): ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಚುನಾವಣಾ ಆಯೋಗವು ಕೂಡಾ ಪ್ರಧಾನಿ ಮೋದಿಯವರ ಮುಂದೆ ಶರಣಾಗಿದೆಯೆಂದು ಹೇಳಿದ್ದಾರೆ.
ರಿಸರ್ವ್ ಬ್ಯಾಂಕ್ ಹಾಗೂ ಸಿಬಿಐಗಳಂತೆ ಚುನಾವಣಾ ಆಯೋಗವು ಕೂಡಾ ಪ್ರಧಾನಿ ಮೋದಿಯವರ ಮುಂದೆ ಶರಣಾಗಿದೆಯೆಂದು ಟ್ವೀಟ್ ಮಾಡಿದ್ದಾರೆ.
ನೋಟು ಆಮಾನ್ಯ ಕ್ರಮ ವಿಚಾರವಾಗಿ ಮೋದಿಯವರನ್ನು ಟೀಕಿಸಿರುವ ಕೇಜ್ರಿವಾಲ್, ನೋಟು ನಿಷೇಧದಿಂದ ಕಪ್ಪುಹಣಕ್ಕೆ ಕಡಿವಾಣ ಬೀಳುತ್ತದೆ ಎಂದು ಪ್ರಧಾನಿಯವರು ಹೇಳಿದ್ದರು, ಆದರೆ ಪಂಜಾಬ್ ಹಾಗೂ ಗೋವಾಗಳಲ್ಲಿ ಧಾರಾಳವಾಗಿ ಮತದಾರರಿಗೆ ಹಣ ಹಂಚಲಾಗಿದೆ. ಹಾಗಾದರೆ ನೋಟು ಅಮಾನ್ಯ ಕ್ರಮದ ಪ್ರಯೋಜನವೇನಾಯಿತು ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ತನ್ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಕೇಜ್ರಿವಾಲ್, ಗೋವಾ ಹಾಗೂ ಪಂಜಾಬ್’ನಲ್ಲಿ ಇಂದು ಇತಿಹಾಸ ಸೃಷ್ಟಿಯಾಗಲಿದೆಯೆಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.