ದೇಶದ ಅತ್ಯಂತ ಮಹತ್ವದ ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಸಿಕ್ರಿ!

Published : Jan 24, 2019, 03:14 PM IST
ದೇಶದ ಅತ್ಯಂತ ಮಹತ್ವದ ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಸಿಕ್ರಿ!

ಸಾರಾಂಶ

ಸಿಬಿಐಯ ಮಧ್ಯಂತರ ನಿರ್ದೇಶಕರಾಗಿ ಎಂ ನಾಗೇಶ್ವರ ರಾವ್ ನೇಮಕ| ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ| ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಿಕ್ರಿ| ಸಿಕ್ರಿ ನಿರ್ಧಾರಕ್ಕೆ ಅರ್ಜಿದಾರರ ತೀವ್ರ ಆಕ್ಷೇಪ

ನವದೆಹಲಿ(ಜ.24): ಎಂ ನಾಗೇಶ್ವರ ರಾವ್ ಅವರನ್ನು ಸಿಬಿಐಯ ಮಧ್ಯಂತರ ನಿರ್ದೇಶಕರಾಗಿ ನೇಮಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಕೆ ಸಿಕ್ರಿ ಹಿಂದೆ ಸರಿದಿದ್ದಾರೆ.

ಸುಪ್ರೀಂ ಕೋರ್ಟ್ ಮುಂದೆ ಇಂದು ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ, ಹಿರಿಯ ನ್ಯಾಯವಾದಿ ದುಶ್ಯಂತ್ ದಾವೆಗೆ ಈ ಪ್ರಕರಣದ ವಿಚಾರಣೆಯನ್ನು ತಾವು ನಡೆಸುವುದಿಲ್ಲ ಎಂದು ಸಿಕ್ರಿ ತಿಳಿಸಿದರು. 

ನ್ಯಾಯಮೂರ್ತಿ ಸಿಕ್ರಿಯವರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರೇತರ ಸಂಘಟನೆ ಪರ ವಕೀಲ ದುಶ್ಯಂತ್ ದಾವೆ, ವಿಚಾರಣೆಯಿಂದ ಹಿಂದೆ ಸರಿಯುವುದಿದ್ದರೆ ಈ ಹಿಂದೆಯೇ ಹಿಂದೆಯೇ ಸರಿಯಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಿರುವ ಉನ್ನತ ಮಟ್ಟದ ತಂಡದಲ್ಲಿ ನ್ಯಾಯಮೂರ್ತಿ ಸಿಕ್ರಿ ಕೂಡ ಇದ್ದರು.

ಇನ್ನು ಇದೇ ಅರ್ಜಿಯ ವಿಚಾರಣೆಯಿಂದ ಕಳೆದ ಸೋಮವಾರವಷ್ಟೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹಿಂದೆ ಸರಿದಿದ್ದದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಒಂದು ಪದದಿಂದ ಜನರ ಮನಸ್ಸನ್ನು ಬದಲಿಸಿದ Thalapathy Vijay; ಆಡಳಿತದಲ್ಲಿದ್ದ ಪಕ್ಷಕ್ಕೆ ಪೆಟ್ಟು ಕೊಟ್ಟ ನಟ
ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ, ಸನ್ ಟಿವಿ ಷೇರುಗಳು ದಿಢೀರ್ ಕುಸಿತ, ಕಾರಣವಾಗಿದ್ದು ಈ ಪಕ್ಷ!