ಕರ್ನಾಟಕ ಹೈಕೋರ್ಟ್ ಸಿಜೆ ಈಗ ಸುಪ್ರೀಂಕೋರ್ಟ್ ಜಡ್ಜ್

Published : Jan 16, 2019, 09:14 PM IST
ಕರ್ನಾಟಕ ಹೈಕೋರ್ಟ್ ಸಿಜೆ ಈಗ ಸುಪ್ರೀಂಕೋರ್ಟ್ ಜಡ್ಜ್

ಸಾರಾಂಶ

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು, [ಜ.16]: ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿಗೆ ನ್ಯಾಯಮೂರ್ತಿಗೆ ಪದೋನ್ನತಿ ದೊರೆತಿದೆ.

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ಇಂದು [ಬುಧವಾರ] ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ತಿಳಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರ ಅಂಕಿತ ಬಿದ್ದ ನಂತರ ಆದೇಶ ಹೊರಡಿಸಲಾಗಿದೆ.

ಜ.10ರಂದು ನಡೆದಿದ್ದ ಸುಪ್ರೀಂಕೋರ್ಟ್ ಕೊಲೀಜಿಯಂ ಸಭೆಯಲ್ಲಿ ನ್ಯಾಯಮೂರ್ತಿಗಳಾದ ಮಹೇಶ್ವರಿ ಹಾಗೂ ಖನ್ನಾ ಹೆಸರು ಅಂತಿಮಗೊಳಿಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು