
ನವದೆಹಲಿ(ಜ.04): ಸುಪ್ರೀಂ ಕೋರ್ಟ್'ನ 44ನೇ ಮುಖ್ಯ ನ್ಯಾಯಾಧೀಶರಾಗಿ ಜೆ.ಎಸ್.ಖೇಹರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೆ.ಎಸ್.ಖೇಹರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಜೆ.ಎಸ್.ಖೇಹರ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಸಿಖ್ ಸಮುದಾಯದ ಮೊದಲಿಗರಾಗಿದ್ದಾರೆ. ಆದರೆ ಇವರ ಅವಧಿ ಕೇವಲ 7 ತಿಂಗಳು ಮಾತ್ರ ಇರುತ್ತದೆ. ಸುಪ್ರೀ ಕೋರ್ಟ್ ನ್ಯಾಯಾಧೀಶರಾಗುವ ಮೊದಲು ಕರ್ನಾಟಕ ಹೈಕೋರ್ಟ್'ನ ನ್ಯಾಯಾಧೀಶರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.