ಹಿಮಾಚಲದ ಹೈಕೋರ್ಟ್‌ ಸಿಜೆ ಆಗಿ ಕನ್ನಡಿಗ ನ್ಯಾ. ನಾರಾಯಣಸ್ವಾಮಿ!

Published : Oct 07, 2019, 10:28 AM IST
ಹಿಮಾಚಲದ ಹೈಕೋರ್ಟ್‌ ಸಿಜೆ ಆಗಿ ಕನ್ನಡಿಗ ನ್ಯಾ. ನಾರಾಯಣಸ್ವಾಮಿ!

ಸಾರಾಂಶ

ಹಿಮಾಚಲದ ಹೈಕೋರ್ಟ್‌ ಸಿಜೆ ಆಗಿ ಕನ್ನಡಿಗ ನ್ಯಾ.ಲಿಂಗಪ್ಪ ನಾರಾಯಣಸ್ವಾಮಿ ಪ್ರಮಾಣ ಸ್ವೀಕಾರ| ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಹಾಗೂ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧೀಕರಣದಲ್ಲೂ ಸೇವೆ ಸಲ್ಲಿಸಿದ್ದ ನಾರಾಯಣಸ್ವಾಮಿ

ಶಿಮ್ಲಾ[ಅ.07]: ಕರ್ನಾಟಕ ಮೂಲದ ಹಾಗೂ ಕರ್ನಾಟಕ ಹೈಕೋರ್ಟ್‌ನಲ್ಲಿ ಅತೀ ದೀರ್ಘಕಾಲೀನವಾಗಿ ನ್ಯಾಯಾಧೀಶರಾಗಿದ್ದ ಲಿಂಗಪ್ಪ ನಾರಾಯಣ ಸ್ವಾಮಿ ಅವರು ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಭಾನುವಾರ ಹಿಮಾಚಲದ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ನ್ಯಾ.ಲಿಂಗಪ್ಪ ನಾರಾಯಣ ಸ್ವಾಮಿ ಅವರಿಗೆ ಹಿಮಾಚಲಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣವಚನವನ್ನು ಬೋಧಿಸಿದರು.

1987ರಲ್ಲಿ ವಕೀಲರಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದ ನ್ಯಾ. ಲಿಂಗಪ್ಪ ಅವರು, ಕರ್ನಾಟಕ ಹೈಕೋರ್ಟ್‌ನಲ್ಲೇ ವಕೀಲರಾಗಿ ಸೇವೆ ಸಲ್ಲಿಸಿದರು. ಆ ನಂತರ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಹಾಗೂ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧೀಕರಣದಲ್ಲೂ ಸೇವೆ ಸಲ್ಲಿಸಿದ್ದರು.

ಕೊನೆಗೆ 2007ರ ಜು.4ರಂದು ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನ್ಯಾ.ಲಿಂಗಪ್ಪ ಅವರು ನೇಮಕಗೊಂಡರು. ಬಳಿಕ 2009ರ ಏ.17ರಂದು ಕರ್ನಾಟಕದ ಶಾಶ್ವತ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರ ನೇಮಕವಾಗುವವರೆಗೂ ನ್ಯಾ.ಲಿಂಗಪ್ಪ ಅವರು ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ