
ದೆಹಲಿ[ಆ.07]: 370ನೇ ವಿಧಿ ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ವಿರೋಧ ಮಾಡಿದ್ದ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಒಂದೆಡೆ ಸೋನಿಯಾ ಮತ್ತು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿದ್ದರೆ, ಕೆಲ ಹಿರಿ- ಕಿರಿ ನಾಯಕರು ಬಹಿರಂಗವಾಗಿಯೇ ಸರ್ಕಾರದ ನಿರ್ಧಾರ ಬೆಂಬಲಿಸುವ ಮೂಲಕ ಪಕ್ಷಕ್ಕೆ ಸಡ್ಡು ಹೊಡೆದಿದ್ದಾರೆ.
ಅದರಲ್ಲೂ ರಾಹುಲ್ ಗಾಂಧಿ ಆಪ್ತ, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ನಲ್ಲಿರುವ ಜ್ಯೋತಿರಾಧಿತ್ಯ ಸಿಂಧಿಯಾ ಕೇಂದ್ರದ ಪರವಾಗಿ ನಿಂತಿದ್ದು ಕೈ ಪಾಲಿಗೆ ಹಿನ್ನಡೆಯಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೇಂದ್ರದ ಈ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಉತ್ತಮವಾಗುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಬಹುದಿತ್ತು. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತದೃಷ್ಟಿಯಿಂದ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಕೈ ಹಿರಿಯ ನಾಯಕರಾದ ಜನಾರ್ಧನ್ ದ್ವಿವೇದಿ ಹಾಗೂ ದೀಪೆಂದರ್ ಹೂಡ 370ನೇ ವಿಧಿಯನ್ನು ರದ್ದು ಮಾಡಿದ ಕೇಂದ್ರದ ನಿಲುವನ್ನು ಸ್ವಾಗತಿಸಿದ್ದು, ರಾಷ್ಟ್ರತ ಹಿತಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಹಾಗಾಗಿ ನಾವು ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದರಿಂದಾಗಿ ಕಾಶ್ಮೀರ ಸಂಬಂಧ ಉಂಟಾಗಿದ್ದ ಐತಿಹಾಸಿಕ ಪ್ರಮಾದ ಅಳಿಸಿದಂತಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.