ಕಾಂಗ್ರೆಸ್‌ ಹೈಕಮಾಂಡ್‌ಗೆ ಸಡ್ಡು ಹೊಡೆದ ಸಿಂಧಿಯಾ!: ಬಿಜೆಪಿಗೆ ಸೇರ್ಪಡೆ?

Published : Aug 31, 2019, 08:33 AM IST
ಕಾಂಗ್ರೆಸ್‌ ಹೈಕಮಾಂಡ್‌ಗೆ ಸಡ್ಡು ಹೊಡೆದ ಸಿಂಧಿಯಾ!: ಬಿಜೆಪಿಗೆ ಸೇರ್ಪಡೆ?

ಸಾರಾಂಶ

ಅಧ್ಯಕ್ಷ ಪಟ್ಟ ಕೊಡದಿದ್ದರೆ ನನ್ನ ದಾರಿ ನನ್ಗೆ: ಸಿಂಧಿಯಾ ಎಚ್ಚರಿಕೆ| ಹೈಕಮಾಂಡ್‌ಗೆ ಸಡ್ಡು ಹೊಡೆದ ಜ್ಯೋತಿರಾದಿತ್ಯ ಸಿಂಧಿಯಾ| ಎಚ್ಚರಿಕೆ ಬೆನ್ನಲ್ಲೇ ದಿಲ್ಲೀಲಿ ಕಮಲ್‌ನಾಥ್‌- ಸೋನಿಯಾ ಭೇಟಿ| ಅಧ್ಯಕ್ಷ ಪಟ್ಟಕೊಡದಿದ್ದರೆ ಬಿಜೆಪಿಗೆ ಹೋಗುವ ಸಾಧ್ಯತೆ

ನವದೆಹಲಿ[ಆ.31]: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲ್‌ನಾಥ್‌ ಜೊತೆ ನೇರಾನೇರಾ ಸಮರಕ್ಕೆ ಇಳಿದಿರುವ ಕಾಂಗ್ರೆಸ್‌ನ ಯುವಕ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇದೀಗ ತಮಗೆ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡದೇ ಹೋದಲ್ಲಿ ನನ್ನ ದಾರಿ ನನಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಅಧ್ಯಕ್ಷ ಪಟ್ಟಸಿಗದೇ ಹೋದಲ್ಲಿ ಸಿಂಧಿಯಾ ಬಿಜೆಪಿ ಪಾಳಯಕ್ಕೆ ಜಿಗಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಈ ಬೆಳವಣಿಗೆಗಳಿಂದ ಆತಂಕಿತಗೊಂಡಿರುವ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಧ್ಯಪ್ರದೇಶದ ಹಾಲಿ ಕಾಂಗ್ರೆಸ್‌ ಅಧ್ಯಕ್ಷ, ಸಿಎಂ ಕಮಲ್‌ನಾಥ್‌ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.

ರಾಜ್ಯ ವಿಧಾಸಭಾ ಚುನಾವಣೆ ಬಳಿಕ ಸಿಎಂ ಹುದ್ದೆಯಿಂದ ವಂಚಿತರಾಗಿದ್ದ ಸಿಂಧಿಯಾ, ಉಪಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣಿಟ್ಟಿದ್ದರು. ಆದರೆ ಅದು ಸಿಕ್ಕಿರಲಿಲ್ಲ. ಹೀಗಾಗಿ ಅವರ ಕಣ್ಣು ರಾಜ್ಯ ಕಾಂಗ್ರೆಸ್‌ ಭಘಟಕದ ಅಧ್ಯಕ್ಷ ಹುದ್ದೆ ಮೇಲೆ ಬಿದ್ದಿತ್ತು. ಆದರೆ ವಿಧಾನಸಭಾ ಚುನಾವಣೆ ಬೆನ್ನಲ್ಲೇ, ಲೋಕಸಭಾ ಚುನಾವಣೆ ಬಂದ ಹಿನ್ನೆಲೆಯಲ್ಲಿ ಕಮಲ್‌ನಾಥ್‌ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆದಿದ್ದರು. ಆದರೆ ಚುನಾವಣೆ ಮುಗಿದು 3 ತಿಂಗಳಾಗುತ್ತಾ ಬಂದರೂ, ಹುದ್ದೆ ಬದಲಾವಣೆ ಸುಳಿವು ಕಂಡು ಬಂದಿರಲಿಲ್ಲ.

ಜೊತೆಗೆ ಇತರೆ ಕೆಲ ನಾಯಕರ ಹೆಸರು ಅಧ್ಯಕ್ಷ ಹುದ್ದೆಗೆ ಕೇಳಿಬಂದಿತ್ತು. ಇದರಿಂದ ಕೆಂಡಾಮಂಡಲಾಗಿರುವ ಸಿಂಧಿಯಾ, ಅಧ್ಯಕ್ಷ ಸ್ಥಾನಕ್ಕೆ ಪಟ್ಟುಹಿಡಿದಿದ್ದಾರೆ. ಒಂದು ವೇಳೆ ಹುದ್ದೆ ಸಿಗದೇ ಹೋದಲ್ಲಿ ನನ್ನ ದಾರಿ ನನಗೆ ಎಂಬ ಸಂದೇಶವನ್ನೂ ಪಕ್ಷದ ನಾಯಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸೋನಿಯಾ, ಸಿಎಂ ಕಮಲ್‌ನಾಥ್‌ರನ್ನು ದೆಹಲಿಗೆ ಕರೆಸಿ ಮಾತುಕತೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ