ಬೆಂಗಳೂರಿನ ಪ್ರಭಾವಿ ಶಾಸಕರಿಂದ 150 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗ ಗುಳುಂ?

Published : Dec 07, 2018, 09:31 PM IST
ಬೆಂಗಳೂರಿನ ಪ್ರಭಾವಿ ಶಾಸಕರಿಂದ 150 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗ ಗುಳುಂ?

ಸಾರಾಂಶ

ರಾಜ್ಯ ಸರಕಾರದಲ್ಲಿ ಪ್ರಭಾವಿ ಸಚಿವರಾಗಿದ್ದವರೊಬ್ಬರು ಬಿಬಿಎಂಪಿಗೆ ತೆರಿಗೆ ವಂಚನೆ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು.  ಈಗ ಬೆಂಗಳೂರಿಬನ ಮತ್ತೊಬ್ಬ ಶಾಸಕರ ಭೂ ಅಕ್ರಮ ಬಯಲಿಗೆ ಬಂದಿದೆ.

ಬೆಂಗಳೂರು[ಡಿ.07]  ಶಾಸಕ ಭೈರತಿ ಬಸವರಾಜ್ ಭೂ ಅಕ್ರಮವೊಂದು ಬಯಲಿಗೆ ಬಂದಿದೆ.  ಸರ್ಕಾರಿ ಜಮೀನಿನಲ್ಲಿ ಖಾಸಗೀ ಲೇಔಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಶಾಸಕ ಭೈರತಿ ಬಸವರಾಜ್ ಮತ್ತು ಬೆಂಬಲಿಗರಿಂದ ಭಾರೀ ಅಕ್ರಮ ಆಗಿದೆ ಎಂಬ ಮಾತು ಕೇಳಿ ಬಂದಿದೆ.

ಮೇಡಹಳ್ಳಿ ಸರ್ವೇ ನಂಬರ್ 89ರಲ್ಲಿ ಅಕ್ರಮವಾಗಿದೆ ಎಂದು ಹೇಳಲಾಗಿದೆ. 14.5 ಎಕರೆ ಸರ್ಕಾರಿ ಜಮೀನಿನಲ್ಲಿ ಖಾಸಗೀ ಲೇಔಟ್ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಬಂದಿದೆ. ಈ ಹಿಂದೆ 2013ರಲ್ಲಿ ವಿವಿಧ ಸಮುದಾಯಗಳಿಗೆ ಹಂಚಿಕೆ ಯಾಗಿದ್ದ ಭೂಮಿ ಇದಾಗಿದ್ದು ಖಾಸಗಿ ಭೂಮಿಯಾಗಿ ಪರಿವರ್ತನೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಕರಾವಳಿ ಜನಕೂಟ, ಕೇರಳ ಸಮಾಜ, ಸವಿತಾ ಸಮಾಜ, ಬಲಿಜ ಸಮಾಜ,ವಾಲ್ಮೀಕಿ ಸಮಾಜ, ಒಕ್ಕಲಿಗ ಸಮಾಜ, ಭೋವಿ ಸಮುದಾಯಕ್ಕೆ ಹಂಚಿಕೆ ಮಾಡಲು ತೀರ್ಮಾನಿಸಲಾಗಿತ್ತು. ಶಾಸಕ ಭೈರತಿ ಬಸವರಾಜ್ ಮತ್ತು ಸ್ಥಳೀಯ ಕಾರ್ಪೋರೇಟರ್‌ಗಳು ಲೇಔಟ್ ನಿರ್ಮಾಣ ಮಾಡುತ್ತಿದ್ದಾರೆ. ಸ್ಥಳೀಯ ತಹಶಿಲ್ದಾರ್ ಮತ್ತು ಶಾಸಕ ಭೈರತಿ ಬಸವರಾಜ್ ರಿಂದ ಅಕ್ರಮ ದಾಖಲೆ ಸೃಷ್ಟಿಸಲಾಗಿದೆ ಎಂದು ಹೇಳಲಾಗಿದೆ.

ಸರ್ಕಾರಿ ಭೂಮಿಯ ಇಂದಿನ ಮೌಲ್ಯ 150ಕೋಟಿಗೂ ಹೆಚ್ಚಿದ್ದು ಅಕ್ರಮ ಆಗಿದೆ  ಎಂದು ತಹಶೀಲ್ದಾರ್ ಗೆ ದಾಖಲೆ ಸಮೇತ ಮನವಿ ಮಾಜಿ ಶಾಸಕ ನಂದೀಶ್ ರೆಡ್ಡಿ ಮನವಿ ಮಾಡಿದ್ದು ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!