
ಬೆಂಗಳೂರು[ಜೂ. 30] ರಾಜ್ಯ ಮುಖ್ಯ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾವಧಿ ಮುಕ್ತಾಯವಾಗಿದೆ. 37 ವರ್ಷಗಳ ಕಾಲ ಸರ್ಕಾರಿ ಕರ್ತವ್ಯದಲ್ಲಿದ್ದ ಕೆ.ರತ್ನಪ್ರಭಾ ಸೇವಾವಧಿ ಇಂದು ಅಂತ್ಯವಾಗುತ್ತಿದ್ದು ಹೊಸ ಕಾರ್ಯದರ್ಶಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಆರಂಭದಲ್ಲಿ ರತ್ನಪ್ರಭಾ ಅವರನ್ನೇ ಮುಂದುವರಿಸಲು ಸಿಎಂ ಕುಮಾರಸ್ವಾಮಿ ಹಿಂದೇಟು ಹಾಕಿದ್ದರು. ಇದೀಗ ಟಿ.ಎಂ. ವಿಜಯ್ ಭಾಸ್ಕರ್ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ರತ್ನಪ್ರಭಾ ಅವರನೇ ಮುಂದುವರಿಸಿ ಎಂದು ಜೂನ್ 17 ಕೇಂದ್ರಕ್ಕೆ ಸಿಎಂ ಪತ್ರ ಬರೆದಿದ್ದರು. ಆದರೆ ನಂತರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.
ನಿವೃತ್ತಿಯಾಗುತ್ತಿರುವ ಕೆ.ರತ್ನಪ್ರಭಾ ಸರಣಿ ಟ್ವೀಟ್ ಗಳನ್ನು ಮಾಡಿದ್ದು ಬೆಳಗಾವಿ, ಬೀದರ್, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿದ್ದಾರೆ. ಅಲ್ಲದೇ 37 ವರ್ಷದ ಅವಧಿ ಹೇಗಿತ್ತು ಎಂಬುದನ್ನು ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.