
ಬೆಂಗಳೂರು : ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು 1050 ಕೋಟಿ ರು. ಬಾಕಿ ಉಳಿಸಿಕೊಂಡಿದ್ದು, ಈ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಸೋಮವಾರ ದೆಹಲಿಗೆ ತೆರಳುತ್ತಿರುವುದಾಗಿ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಉಪಕಾರ್ಯದರ್ಶಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಯೋಜನೆ ಅಡಿ ಕೇಂದ್ರ ಸರ್ಕಾರದಿಂದ ಅನುದಾನ ಬರದಿದ್ದರಿಂದ ರಾಜ್ಯ ಸರ್ಕಾರವೇ ಈ ಮೊತ್ತವನ್ನು ಭರಿಸಿದೆ. ಬಾಕಿ ಮೊತ್ತ ಶೀಘ್ರ ಬಿಡುಗಡೆ ಮಾಡುವಂತೆ ಸೋಮವಾರ ಕೇಂದ್ರ ಆರ್ಡಿಪಿಆರ್ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಸ್ವತ್ತುಗಳಲ್ಲಿ ಸ್ಥಳಾವಕಾಶ ಇರುವ ಕಡೆ ಗಿಡನೆಡುವ ಕಾರ್ಯಕ್ರಮ ರೂಪಿಸಲು ಉದ್ಯೋಗ ಖಾತರಿ ಯೋಜನೆ ಅಡಿ ಕ್ರಿಯಾ ಯೋಜನೆ ರೂಪಿಸಲಾಗುವುದು. ಅಲ್ಲದೇ, ತೋಟಗಾರಿಕೆ ನಿರತ ರೈತರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.