ಕಾಂಗ್ರೆಸ್‌, ಖರ್ಗೆ ಪರ ಪ್ರಚಾರ: ಶಿಕ್ಷಕ ಅಮಾನತು

Published : Apr 10, 2019, 09:56 AM IST
ಕಾಂಗ್ರೆಸ್‌, ಖರ್ಗೆ ಪರ  ಪ್ರಚಾರ: ಶಿಕ್ಷಕ ಅಮಾನತು

ಸಾರಾಂಶ

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸಾಪ್‌ನಲ್ಲಿ ಕಾಂಗ್ರೆಸ್‌ ಮತ್ತು ಕಲಬುರಗಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ್‌ ಖರ್ಗೆ ಪರ ಪ್ರಚಾರ ನಡೆಸುತ್ತಿದ್ದ ಆರೋಪದ ಮೇಲೆ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. 

ಕಲಬುರಗಿ (ಏ. 10): ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸಾಪ್‌ನಲ್ಲಿ ಕಾಂಗ್ರೆಸ್‌ ಮತ್ತು ಕಲಬುರಗಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ್‌ ಖರ್ಗೆ ಪರ ಪ್ರಚಾರ ನಡೆಸುತ್ತಿದ್ದ ಆರೋಪದ ಮೇಲೆ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. 

ಕಲಬುರಗಿ ತಾಲೂಕಿನ ಭೀಮಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ವಿಠ್ಠಲ್‌ ವಗ್ಗನ್‌ ಅಮಾನತಾದ ಶಿಕ್ಷಕ. ತಾವು ಸರ್ಕಾರಿ ನೌಕರ ಎಂಬುದನ್ನು ಮರೆತು ಸೇವಾ ನಿಯಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ.

ಬಿಜೆಪಿ ವಿರುದ್ಧ ಮತ್ತು ಕೇಂದ್ರದ ಮಂತ್ರಿಗಳು, ಸಂಸದರ ವಿರುದ್ಧ ವಾಟ್ಸ್‌ಆ್ಯಪ್‌, ಫೇಸ್ಬುಕ್‌ಗಳಲ್ಲಿ ಅವಹೇಳನಕಾರಿ, ಅಸಂವಿಧಾನಿಕ ಪದ ಬಳಸಿ ವ್ಯಂಗ್ಯಚಿತ್ರಗಳ ಸಹಿತ ನಿಂದನೆ ಮಾಡಿದ್ದಾರೆ. ಹೀಗಾಗಿ ಕೆಸಿಎಸ್‌ಆರ್‌, ಸಿಸಿಎ ಮತ್ತು ಪ್ರಜಾಪ್ರತಿನಿಧಿ ಕಾಯಿದೆ 1951ರ ಪ್ರಕಾರ ವಗ್ಗನ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಡಿಡಿಪಿಐ ಶಾಂತಗೌಡ ಪಾಟೀಲ್‌ ಅಮಾನತು ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ