ನಾಪತ್ತೆಯಾಗಿ ನಿವೃತ್ತಿಯಾಗುತ್ತಿರುವ ಮೊದಲ ಹೈಕೋರ್ಟ್​​ ನ್ಯಾಯಮೂರ್ತಿ ಸಿ.ಎಸ್ ಕರ್ಣನ್

Published : Jun 12, 2017, 06:27 PM ISTUpdated : Apr 11, 2018, 01:05 PM IST
ನಾಪತ್ತೆಯಾಗಿ ನಿವೃತ್ತಿಯಾಗುತ್ತಿರುವ ಮೊದಲ ಹೈಕೋರ್ಟ್​​ ನ್ಯಾಯಮೂರ್ತಿ ಸಿ.ಎಸ್ ಕರ್ಣನ್

ಸಾರಾಂಶ

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ಅವರು ಇಂದು ನಿವೃತ್ತಿಯಾಗಿದ್ದಾರೆ. ಈ ಮೂಲಕ ನಾಪತ್ತೆಯಾಗಿ ನಿವೃತ್ತಿಯಾಗುತ್ತಿರುವ ಮೊದಲ ಹೈಕೋರ್ಟ್​​ ನ್ಯಾಯಮೂರ್ತಿ ಎಂಬ ದಾಖಲೆಗೆ ಪಾತ್ರರಾದರು.  

ನವದೆಹಲಿ (ಜೂ.12): ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ಅವರು ಇಂದು ನಿವೃತ್ತಿಯಾಗಿದ್ದಾರೆ. ಈ ಮೂಲಕ ನಾಪತ್ತೆಯಾಗಿ ನಿವೃತ್ತಿಯಾಗುತ್ತಿರುವ ಮೊದಲ ಹೈಕೋರ್ಟ್​​ ನ್ಯಾಯಮೂರ್ತಿ ಎಂಬ ದಾಖಲೆಗೆ ಪಾತ್ರರಾದರು.  

ಜೂ. 12, 1955ರಂದು ಜನಿಸಿದ್ದ ಕರ್ಣನ್, ದೇಶದ ನ್ಯಾಯಾಂಗ  ವ್ಯವಸ್ಥೆಯಲ್ಲಿ  ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ವಿವಾದ ಎಬ್ಬಿಸಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಂಗ ನಿಂದನೆ, ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ ಮತ್ತು ಮಾನಸಿಕ ಸ್ಥಿತಿ ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಅಪರೂಪದ ಪ್ರಕರಣಗಳಿಗೆ ಕರ್ಣನ್ ಮುಖ್ಯಭೂಮಿಕೆ ಒದಗಿಸಿದರು. ನಿವೃತ್ತಿಯಾಗುವ ನ್ಯಾಯಾಧೀಶರಿಗೆ ಸಾಮಾನ್ಯವಾಗಿ ವೈಭವದ ವಿದಾಯ ಸಮಾರಂಭವನ್ನು ಆಯೋಜಿಸಲಾಗುತ್ತದೆ. ಅವರ ಸಹೋದ್ಯೋಗಿಗಳನ್ನೂ ಒಳಗೊಂಡಂತೆ ಪ್ರಮುಖ ಘಟ್ಟದಲ್ಲಿ ಅವರೊಂದಿಗಿದ್ದ ಒಡನಾಡಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?