
ತಿರುವನಂತಪುರಂ(ಏ.22): ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಖಾಸಗಿ ಪ್ರಯಾಣಿಕ ಸಾರಿಗೆ ಸಂಸ್ಥೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ತಿರುವನಂತಪುರಂನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ ಬಸ್ ಅಲ್ಲಪುಜಾ ಬಳಿ ಕೆಟ್ಟು ನಿಂತಿದೆ. ಈ ವೇಳೆ ಮತ್ತೊಂದು ಬಸ್ ನಲ್ಲಿ ಪರಯಾಣಿಕರನ್ನು ವೈತಿಲಾಗೆ ಕರೆತರಲಾಗಿದೆ.
"
ಇದನ್ನು ಪ್ರಶ್ನಿಸಿದ ಇಬ್ಬರು ಪ್ರಯಾಣಿಕರ ಮೇಲೆ ಬಸ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಪ್ರಯಾಣಿಕರೋರ್ವರು ಹಲ್ಲೆಯ ವಿಡಿಯೋ ಮಾಡಿದ್ದಾರೆ.
ಸದ್ಯ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಸಿಬ್ಬಂದಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.