
ಬೆಂಗಳೂರು (ಮಾ. 26): ಆರ್ಎಸ್'ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆಪ್ತನೇ ಬಿಜೆಪಿ ವಿರುದ್ದ ಸ್ಪರ್ಧೆಗೆ ನಿರ್ಧರಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಲ್ಲಡ್ಕ ಭಟ್ ಆಪ್ತ ಶ್ರೀಕರ ಪ್ರಭು ಪಕ್ಷೇತರನಾಗಿ ಕಣಕ್ಕಿಳಿಯಲಿದ್ದಾರೆ. 2014 ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ತೇಜೋವಧೆಗೆ ಯತ್ನಿಸಿದ್ದ ಆರೋಪದಲ್ಲಿ ಬಿಜೆಪಿಯಿಂದ ಶ್ರೀಕರ ಪ್ರಭು ಉಚ್ಚಾಟಿಸಲ್ಪಟ್ಟಿದ್ದರು. ರಾಜ್ಯ ಕಾರ್ಯಕಾರಿಣಿ ಸದಸ್ಯತ್ವದಿಂದಲೂ ಶ್ರೀಕರ ಪ್ರಭುರನ್ನ ಆರು ವರ್ಷ ಉಚ್ಚಾಟಿಸಲಾಗಿದೆ. ಕಲ್ಲಡ್ಕ ಆಪ್ತರಾಗಿದ್ದರೂ ಸಂಸದ ನಳಿನ್ ವಿರೋಧವಿರುವ ಕಾರಣ ಮತ್ತೆ ಪಕ್ಷ ಸೇರ್ಪಡೆ ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿ ಮಂಗಳೂರು ದಕ್ಷಿಣದಲ್ಲಿ ಪಕ್ಷೇತರನಾಗಿ ಶ್ರೀಕರ ಪ್ರಭು ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಶಾಸಕ ಜೆ.ಆರ್.ಲೋಬೋ ವಿರುದ್ದ ತೊಡೆ ತಟ್ಟಲು ನಿಂತಿರುವ ಬಿಜೆಪಿಗೆ ಶ್ರೀಕರ ಪ್ರಭು ಸ್ಪರ್ಧೆ ಬಿಸಿ ತುಪ್ಪವಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಅತ್ಯಂತ ಆಪ್ತವಾಗಿ ಗುರುತಿಸಿಕೊಂಡಿರುವ ಶ್ರೀಕರ ಪ್ರಭು ಕಳೆದ ಬಾರಿ ಬಿಜೆಪಿ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷನಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.