
ಬೆಳಗಾವಿ(ಅ.27): ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಸಹೋದರ ಪೊಲೀಸ್ ಪೇದೆ ಯಲ್ಲಪ್ಪ ಹಂಡಿಬಾಗ್ (೨೮) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗೋಕಾಕ್ ತಾಲೂಕಿನ ಕುಲಗೋಡ ಗ್ರಾಮದ ಬಾಡಿಗೆ ಮನೆಯಲ್ಲಿ ಯಲ್ಲಪ್ಪ ನೇಣಿಗೆ ಶರಣಾಗಿದ್ದಾರೆ. ಕುಲಗೋಡ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದ ಯಲ್ಲಪ್ಪ, ೨೦೦೮ ರ ಬ್ಯಾಚ್`ನ ಪೊಲೀಸ್ ಪೇದೆ. ನಿನ್ನೆಯಷ್ಟೇ, ಕಿತ್ತೂರು ಉತ್ಸವದ ಬಂದೋಬಸ್ತ್ ಮುಗಿಸಿ ಕುಲಗೋಡಕ್ಕೆ ವಾಪಸ್ಸಾಗಿದ್ದರು. ಸ್ಥಳಕ್ಕೆ ಗೋಕಾಕ್ ಡಿಎಸ್ಪಿ ವೀರಭದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.