ಬಾಬರಿ ಮಸೀದಿ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಕಲ್ಯಾಣ್ ಸಿಂಗ್!

Published : Sep 27, 2019, 07:06 PM IST
ಬಾಬರಿ ಮಸೀದಿ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಕಲ್ಯಾಣ್ ಸಿಂಗ್!

ಸಾರಾಂಶ

ಅಯೋಧ್ಯಾ ಬಾಬರಿ ಮಸೀದಿ ಧ್ವಂಸ ಪ್ರಕರಣ| ಸಿಬಿಐ ನ್ಯಾಯಾಲಯದ ಮುಂದೆ ಶರಣಾದ ಕಲ್ಯಾಣ್ ಸಿಂಗ್| ಕಲ್ಯಾಣ್ ಸಿಂಗ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ| ಅಯೋಧ್ಯೆಯ ಸಿಬಿಐ ವಿಶೇಷ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಮುಂದೆ ಶರಣಾಗತಿ ಅರ್ಜಿ|  2 ಲಕ್ಷ ರೂ. ಬಾಂಡ್‌ನ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು| ರಾಜಸ್ಥಾನಕ್ಕೆ ಹೊಸ ರಾಜ್ಯಪಾಲ ನೇಮಕ ಹಿನ್ನೆಲೆ| ಸಾಂವಿಧಾನಿಕ ಹುದ್ದೆಯಿಂದ ಕೆಳಗಿಳಿದ ಕಲ್ಯಾಣ್ ಸಿಂಗ್| 

ಲಕ್ನೋ(ಸೆ.27): ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.  

ಅಯೋಧ್ಯೆಯ ಸಿಬಿಐ ವಿಶೇಷ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಮುಂದೆ ಶರಣಾಗತಿ ಅರ್ಜಿಯೊಂದಿಗೆ ಕಲ್ಯಾಣ್ ಸಿಂಗ್ ಹಾಜರಾದರು. ಬಳಿಕ ನ್ಯಾಯಾಲಯ ಐಪಿಸಿ 153 (ಎ), 153(ಬಿ), 295 ಸೆಕ್ಷನ್‌ಗಳಡಿ ಆರೋಪ ದಾಖಲಿಸಿಕೊಂಡು 2 ಲಕ್ಷ ರೂ. ಬಾಂಡ್‌ನ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿತು.

ರಾಜಸ್ಥಾನಕ್ಕೆ ಹೊಸ ರಾಜ್ಯಪಾಲರ ನೇಮಕವಾಗಿದ್ದು, ಕಲ್ಯಾಣ್ ಸಿಂಗ್ ತಮ್ಮ ಸಾಂವಿಧಾನಿಕ ಹುದ್ದೆಯ ಕರ್ತವ್ಯದಿಂದ ಮುಕ್ತರಾಗಿದ್ದಾರೆ. ಹೀಗಾಗಿ ಸೆ.27r ಒಳಗಾಗಿ ಅವರನ್ನು ಹಾಜರುಪಡಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. 

1992ರ ಡಿಸೆಂಬರ್ 6 ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ಕಲ್ಯಾಣ್ ಸಿಂಗ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಕಲ್ಯಾಣ್ ಸಿಂಗ್ ಜೊತೆಗೆ ಎಲ್ ಕೆ ಅಡ್ವಾಣಿ, ಉಮಾ ಭಾರತಿ, ಸಾಧ್ವಿ ರಿತಾಂಭಾ, ಮಹಾಂತ್ ನೃತ್ಯ ಗೋಪಾಲ್ ದಾಸ್ ಮತ್ತು ಮುರಳಿ ಮನೋಹರ್ ಜೋಶಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಕಲ್ಯಾಣ್ ಸಿಂಗ್ ಹೊರತುಪಡಿಸಿ ಉಳಿದ ಎಲ್ಲ ಬಿಜೆಪಿ ಮುಖಂಡರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ