
ಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಬದಲಾವಣೆ ತರುವ ಗುರಿಯೊಂದಿಗೆ ಕಳೆದ ಫೆಬ್ರವರಿಯಲ್ಲಿ ‘ಮಕ್ಕಳ್ ನೀಧಿ ಮಯ್ಯಂ’ ಪಕ್ಷ ಸ್ಥಾಪಿಸಿದ್ದ ಹೆಸರಾಂತ ಚಿತ್ರನಟ ಕಮಲ್ಹಾಸನ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಮಿತ್ರಪಕ್ಷಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಯಾರ ಜತೆ ಮೈತ್ರಿ ಮಾಡಿಕೊಳ್ಳಬೇಕು ಎಂಬ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ತಮಗೆ ನೀಡಿದೆ ಎಂದು ಪಕ್ಷದ ಸಂಸ್ಥಾಪಕರಾಗಿರುವ ಕಮಲ್ಹಾಸನ್ ಅವರು ಶನಿವಾರ ತಿಳಿಸಿದ್ದಾರೆ. ಅವರ ಈ ಹೇಳಿಕೆ, ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಮಲ್ ಹಿಂಜರಿಯುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
ಡಿಎಂಕೆ ತೊರೆದು ಬಂದರೆ ಕಾಂಗ್ರೆಸ್ ಪಕ್ಷದ ಜತೆ ಮೈತ್ರಿಗೆ ಸಿದ್ಧವಿರುವುದಾಗಿ ಈ ಹಿಂದೆ ಕಮಲ್ ಹೇಳಿದ್ದರು. ಆದರೆ ಡಿಎಂಕೆ ಜತೆಗಿನ ಸಂಬಂಧ ಕಡಿದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿತ್ತು. ಇದೇ ವೇಳೆ, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಮಲ್ಗೆ ಇಷ್ಟವಿಲ್ಲ. ಹೀಗಾಗಿ ಅವರು ಲೋಕಸಭೆ ಚುನಾವಣೆಯಲ್ಲಿ ಯಾರ ಜತೆ ಹೋಗಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.