ಗುಡುಗಿದ ಕಮಲ್ ಹಾಸನ್, ಪಳನಿ ರಾಜೀನಾಮೆಗೆ ಆಗ್ರಹ

Published : Aug 15, 2017, 08:39 PM ISTUpdated : Apr 11, 2018, 01:08 PM IST
ಗುಡುಗಿದ ಕಮಲ್ ಹಾಸನ್, ಪಳನಿ ರಾಜೀನಾಮೆಗೆ ಆಗ್ರಹ

ಸಾರಾಂಶ

ತಮಿಳುನಾಡಿನ ಆಡಳಿತ ಪಕ್ಷ ವಿರುದ್ಧ ಗುಡುಗಿರುವ ಹಿರಿಯ ನಟ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಪಳನಿಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಪಡೆಯಲು ಹೋರಾಟದ ಅಗತ್ಯವಿದೆಯೆಂದಿರುವ ಕಮಲ್ ಹಾಸನ್, ನಿರ್ಭೀತರಾಗಿ ಹೋರಾಡಲು ಜನರಿಗೆ ಕರೆ ನೀಡಿದ್ದಾರೆ.

ಚೆನ್ನೈ: ತಮಿಳುನಾಡಿನ ಆಡಳಿತ ಪಕ್ಷ ವಿರುದ್ಧ ಗುಡುಗಿರುವ ಹಿರಿಯ ನಟ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಪಳನಿಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಪಡೆಯಲು ಹೋರಾಟದ ಻ಗತ್ಯವಿದೆಯೆಂದಿರುವ ಕಮಲ್ ಹಾಸನ್, ನಿರ್ಭೀತರಾಗಿ ಹೋರಾಡಲು ಜನರಿಗೆ ಕರೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ನಡೆಯುವ ದುರಂತ ಹಾಗೂ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಯ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತದೆ, ಆದರೆ ತಮಿಳುನಾಡಿನಮಲ್ಲಿ ಯಾವ ರಾಜಕೀಯ ಪಕ್ಷವು ಯಾಕೆ ಧ್ವನಿ ಎತ್ತಲ್ಲವೆಂದು ಯಾರ ಹೆಸರನ್ನು ಉಲ್ಲೇಖಿಸದೇ ಸರಣಿ ಟ್ವೀಟ್’ಗಳ ಮೂಲಕ ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಸಿಗುವವರೆಗೂ ನಾವು ಗುಲಾಮರಾಗಿರುತ್ತೇವೆ ಎಂದು ಕಮಲ್ ಹೇಳಿದ್ದಾರೆ.

ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಪಳಸನಿಸ್ವಾಮಿ ಹಾಗೂ ಸಚಿವರು, ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಆರೋಪಗಳಿಗೆ ಆಧಾರ ಒದಗಿಸುವಂತೆ ಕಮಲ್ ಹಾಸನ್’ಗೆ ಸವಾಲೆಸೆದಿದ್ದಾರೆ.

ಸರ್ಕಾರದಿಂದ ಉತ್ತರ ಬೇಕಾದರೆ ಕಮಲ್ ಹಾಸನ್ ರಾಜಕೀಯ ಸೇರಲಿ ಎಂದು ಪಳನಿಸ್ವಾಮಿ ಹೇಳಿದರೆ, ಕಮಲ್ ಹಾಸನ್ ಸಮಾಜಕ್ಕೆ ಕೊಟ್ಟ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌