
ಚೆನ್ನೈ(ಮಾ.21): ಬಹುಭಾಷಾ ನಟ ಕಮಲ್ ಹಾಸನ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೂಜಾಟ ಆಧಾರಿತ ಮಹಾಭಾರತ ಗ್ರಂಥವನ್ನು ನಾವು ಗೌರವಿಸುತ್ತಿದ್ದೇವೆ ಎನ್ನುವ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ತಮಿಳುನಾಡಿನ ತಿರುನಲ್ವೆಲಿಯಲ್ಲಿ ಕಮಲ್ ಹಾಸನ್ ವಿರುದ್ಧ ದೂರು ದಾಖಲಾಗಿದೆ. ಮಹಾಭಾರತದಲ್ಲಿ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕೆ ಇಡಲಾಗುತ್ತೆ. ಈ ಗ್ರಂಥದಲ್ಲಿ ಮಹಿಳೆಯನ್ನು ಒಂದು ವಸ್ತುವಾಗಿ ಬಳಸಿಕೊಳ್ಳುತ್ತಿದ್ದೇವೆ ಎಂದು ಟಿವಿಯೊಂದಕ್ಕೆ ನೀಡಿದ ಸಂದರ್ಶನದ ವೇಳೆ ಹೇಳಿದ್ದಾರೆ. ಈ ಮಾತು ಭಾರೀ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.